ಇಂದು ನಂದಿಗಿರಿಧಾಮ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು; ನಾಳೆ ಬಂದ್ – ಜಿಲ್ಲಾಡಳಿತ ಮರು ಆದೇಶ

ಚಿಕ್ಕಬಳ್ಳಾಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭೇಟಿ ಹಿನ್ನೆಲೆಯಲ್ಲಿ ಭಾನುವಾರ (ಇಂದು) ವಿಶ್ವವಿಖ್ಯಾತ ನಂದಿಗಿರಿಧಾಮ (Nandi Hills) ಹಾಗೂ ಸ್ಕಂದಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತದ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ.

ಭಾನುವಾರ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸೋಮವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಧಿಕಾರಿ ರವೀಂದ್ರ ಹಾಗೂ ಎಸ್ಪಿ ನಾಗೇಶ್ ‘ಪಬ್ಲಿಕ್ ಟಿವಿ’ಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಭಾನುವಾರ, ಸೋಮವಾರ ನಂದಿಬೆಟ್ಟ ಸಂಪೂರ್ಣ ಬಂದ್

ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ಹಿತದೃಷ್ಟಿಯಿಂದ 2 ದಿನ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಈಗ ಸಾರ್ವಜನಿಕರು ಹಾಗೂ ಪ್ರವಾಸಿಗರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿದೆ. ಅಲ್ಲದೇ ಸೋಮವಾರ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಸಾಲ ಕೊಡಿಸುವುದಾಗಿ ನಂಬಿಸಿ ಜನರಿಂದ ಹಣ ಪಡೆದು ವಂಚನೆ – ಗ್ಯಾಂಗ್ ಅರೆಸ್ಟ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]