ಹಿಮಾಚಲದಲ್ಲಿ ಭಾರೀ ಮಳೆ – ಕೊಚ್ಚಿ ಹೋಯ್ತು ಕಾರು, ಕುಸಿದು ಬಿದ್ದವು ಅಂಗಡಿಗಳು

ಶಿಮ್ಲಾ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ (Himachal Pradesh) ಬಿಯಾಸ್ ನದಿ ತುಂಬಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ.

ಬಿಯಾಸ್ ನದಿಯ (Beas River) ನೀರಿನ ಮಟ್ಟ ಹೆಚ್ಚಳದಿಂದಾಗಿ ಮಂಡಿ ಜಿಲ್ಲೆಯ ಸೇತುವೆಯ ಮೇಲೆ ನೀರು ಹರಿಯುತ್ತಿದೆ. ಕುಲು ಬಳಿ ಬಿಯಸ್‌ ನದಿಯ ಪ್ರವಾಹಕ್ಕೆ ಕಾರೊಂದು ಕೊಚ್ಚಿಕೊಂಡು ಹೋಗಿದೆ.ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ನದಿ ಬಳಿ ನಿರ್ಮಿಸಿದ ಅಂಗಡಿಗಳು ಕುಸಿದು ಬಿದ್ದಿವೆ. ರಾಷ್ಟ್ರೀಯ ಹೆದ್ದಾರಿ ಕೊಚ್ಚಿಹೋಗಿದೆ.  ಇದನ್ನೂ ಓದಿ: ಗುಡ್‌ನ್ಯೂಸ್‌ – 24 ಗಂಟೆಗಳಲ್ಲಿ KRSನಲ್ಲಿ 2.50 ಅಡಿ ನೀರು ಭರ್ತಿ

ರೈಲ್ವೇ ಹಳಿಗಳ ಮೇಲೆ ಗುಡ್ಡ ಜರಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ. ಬಿಯಾಸ್ ನದಿಯ ನೀರಿನ ಮಟ್ಟವು ವೇಗವಾಗಿ ಏರಿದ ನಂತರ ನದಿಯ ಸಮೀಪ ಮನೆಯಲ್ಲಿ ಸಿಲುಕಿಕೊಂಡಿದ್ದ 6 ಜನರನ್ನು ಎಸ್‌ಡಿಆರ್‌ಎಫ್‌ ರಕ್ಷಿಸಿದೆ.


ಕುಲು, ಮನಾಲಿಯಲ್ಲಿ (Kullu Manali) ಬಹಳಷ್ಟು ಸಮಸ್ಯೆ ಆಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ವೀಡಿಯೋಗಳನ್ನು ಶೇರ್‌ ಮಾಡುತ್ತಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]