ನಂಜನಗೂಡು ದೇವಸ್ಥಾನಕ್ಕೆ ಭೇಟಿ ಕೊಟ್ಟ ಧ್ರುವ ಸರ್ಜಾ ದಂಪತಿ

ಟ ಧ್ರುವ ಸರ್ಜಾ (Dhruva Sarja) ದಂಪತಿ ಮಕ್ಕಳಿಗೆ ಪಂಚಮುಡಿ ಶಾಸ್ತ್ರ ಮಾಡಿಸಲು ನಂಜನಗೂಡು ದೇವಸ್ಥಾನಕ್ಕೆ (Temple) ಭೇಟಿ ನೀಡಿದ್ದಾರೆ. ಮನೆದೇವರಿಗೆ ಮಕ್ಕಳ ಪ್ರಥಮ ಮುಡಿ ಕೊಡುವ ಶಾಸ್ತ್ರ ಮಾಡಿದ್ದಾರೆ ಧ್ರುವ ಸರ್ಜಾ ದಂಪತಿ. ರುದ್ರಾಕ್ಷಿ ಹಾಗೂ ಹಯಗ್ರೀವನ ಪಂಚಮುಡಿ ಶಾಸ್ತ್ರ ಹೇಗಿತ್ತು? ಆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಸಂಪ್ರದಾಯ ಅಂತ ಬಂದರೆ ಧ್ರುವ ಸರ್ಜಾ ಮುಂದೆ ಇರುತ್ತಾರೆ. ಅಚ್ಚುಕಟ್ಟಾಗಿ ಪಾಲಿಸುತ್ತಾರೆ. ಕಳೆದ ಜನವರಿಯಲ್ಲಿ ತಮ್ಮಿಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದರು. ಪುತ್ರಿಗೆ ರುದ್ರಾಕ್ಷಿ ಪುತ್ರನಿಗೆ ಹಯಗ್ರೀವ ಎಂದು ಹೆಸರಿಟ್ಟಿದ್ದರು. ಇದೀಗ ಇಬ್ಬರೂ ಮಕ್ಕಳಿಗೆ ಒಟ್ಟಿಗೆ ಮುಡಿ ಕೊಡಿಸಿದ್ದಾರೆ. ಇದನ್ನೂ ಓದಿ:‘ಚೆಂದಕ್ಕಿಂತ ಚೆಂದ ನೀನೇ ಸುಂದರ’ ಎಂದು ರಾಧಿಕಾ ಪಂಡಿತ್ ಬ್ಯೂಟಿ ಬಣ್ಣಿಸಿದ ನೆಟ್ಟಿಗರು

 

View this post on Instagram

 

A post shared by Sampath Raj???? (@sampath_raj_ds)

ನಂಜನಗೂಡು ಶ್ರೀಕಂಠೇಶ್ವರ ಧ್ರುವ ಸರ್ಜಾರ ಮನೆ ದೇವರು. ಹೀಗಾಗಿ ಮಕ್ಕಳ ಪ್ರಥಮ ಮುಡಿ ಮನೆದೇವರಿಗೆ ಅರ್ಪಿಸಿದ್ದಾರೆ. ರುದ್ರಾಕ್ಷಿ ಹಯಗ್ರೀವನಿಗೆ ಒಟ್ಟಿಗೆ ಮುಡಿ ಕೊಡುವ ಶಾಸ್ತ್ರ ಮಾಡಿಸಿದ್ದಾರೆ. ಈ ವೇಳೆ ಧ್ರುವ ಸರ್ಜಾರನ್ನ ಹತ್ತಿರದಿಂದ ನೋಡಲು ನಂಜನಗೂಡಲ್ಲಿ ಅಪಾರ ಅಭಿಮಾನಿಗಳು ಸೇರಿದ್ದರು.

ಧ್ರುವ ಸರ್ಜಾ ನಟನೆಯ ‘ಕೆಡಿ’ (KD Film) ಮತ್ತು ಮಾರ್ಟಿನ್‌ (Martin Film) ಸಿನಿಮಾಗಳು ಅವರ ಕೈಯಲ್ಲಿವೆ. ಈ ವರ್ಷ ಎರಡು ಸಿನಿಮಾಗಳು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಲಿದೆ.