ಬೆಂಗಳೂರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲ ಬೇಗೆಯಿಂದ ಬೆಂದಿದ್ದ ಬೆಂಗಳೂರಿಗೆ (Bengaluru Rains) ಶನಿವಾರ ಮಳೆರಾಯ ತಂಪೆರೆದಿದ್ದಾನೆ. ರಾಜಧಾನಿಯ ಹಲವೆಡೆ ಮಳೆಯಾಗಿದೆ. ಮಳೆಯಾದ ಖುಷಿಯಲ್ಲಿ ಮಕ್ಕಳು ಕುಣಿದು ಕುಪ್ಪಳಿಸಿದ ದೃಶ್ಯ ಕಂಡುಬಂತು.

ನಗರದ ಸರ್ಕಲ್ ಮಾರಮ್ಮ , ಸ್ಯಾಂಕಿ, ಜಯನಗರ, ಜೆ.ಪಿ.ನಗರ, ಆರ್‌.ಆರ್‌. ನಗರ, ಮೇಖ್ರಿ ಸರ್ಕಲ್‌ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಇದೆ. ಇದನ್ನೂ ಓದಿ: ರಾಜ್ಯದ ವಿವಿಧೆಡೆ ಮಳೆ ಅಬ್ಬರ; ಶಿವಮೊಗ್ಗ, ಬೀದರ್‌ನಲ್ಲಿ ವರುಣಾರ್ಭಟಕ್ಕೆ ಇಬ್ಬರು ಬಲಿ – ಇನ್ನೂ 3 ದಿನ ಮಳೆ ಮುನ್ಸೂಚನೆ

ಬೆಂಗಳೂರು ಅರಮನೆ ಮೈದಾನದ ಸುತ್ತಮುತ್ತ ಮಳೆಯಾಗುತ್ತಿದೆ. ಮೇಖ್ರಿ ಸರ್ಕಲ್‌ ಬಳಿ ಮಳೆ ಜೋರಾಗಿ ಸುರಿಯುತ್ತಿದೆ. ನಿನ್ನೆ ಕೂಡ ನಗರದ ಹಲವೆಡೆ ಮಳೆಯಾಗಿತ್ತು. ಕೆಂಗೇರಿ ಸೇರಿದಂತೆ ದೊಡ್ಡಬಳ್ಳಾಪುರ, ನೆಲಮಂಗದಲ್ಲಿ ನಿನ್ನೆ ಸಂಜೆ ವೇಳೆ ಮಳೆ ಸುರಿದಿತ್ತು.