ಮುಖಕ್ಕೆ ಕಪ್ಪು ಬಣ್ಣ ಬಳಿದುಕೊಂಡು ರಾಯಚೂರು ಕೃಷಿ ವಿವಿ ವಿದ್ಯಾರ್ಥಿಗಳಿಂದ ಕರಾಳ ದಿನಾಚರಣೆ

-ಕೃಷಿ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಕೈಬಿಟ್ಟ ಹಿನ್ನೆಲೆ ಹೋರಾಟ

ರಾಯಚೂರು: ನಾಡಿನೆಲ್ಲಡೆ ರಂಗುರಂಗಿನ ಬಣ್ಣ ಹಚ್ಚಿ ಹೋಳಿ ಹಬ್ಬವನ್ನ ಸಂಭ್ರಮಿಸಿದ್ರೆ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಬಿಟೆಕ್ ವಿದ್ಯಾರ್ಥಿಗಳು ಮಾತ್ರ ಮುಖಕ್ಕೆ ಕಪ್ಪುಬಣ್ಣ ಬಳಿದುಕೊಂಡು ಕರಾಳ ದಿನ ಆಚರಿಸಿದರು.

ಕಳೆದ 27 ದಿನಗಳಿಂದ ಹೋರಾಟ ನಡೆಸಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸರ್ಕಾರದ ಧೋರಣೆ ಖಂಡಿಸಿ ಕಪ್ಪು ಬಣ್ಣ ಬಳಿದುಕೊಂಡು ಪ್ರತಿಭಟಿಸಿದರು. ಕಾಮದಹನ ಮಾಡದೇ ಕಾಮಣ್ಣನ ಪ್ರತಿಕೃತಿ ಮುಂದೆ ಇಟ್ಟುಕೊಂಡು ಹೋರಾಟ ಮುಂದುವರೆಸಿದ್ದಾರೆ.

ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ತಾಂತ್ರಿಕ ವಿದ್ಯಾರ್ಥಿಗಳನ್ನ ಕೈಬಿಟ್ಟಿರುವುದನ್ನ ಖಂಡಿಸಿ ವಿದ್ಯಾರ್ಥಿಗಳು ನಿರಂತರ ಹೋರಾಟ ನಡೆಸಿದ್ದಾರೆ. ಆದ್ರೆ ಇದುವರೆಗೂ ಸರ್ಕಾರ ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಪಂದಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ತಮ್ಮನ್ನ ಹುದ್ದೆಗಳಿಗೆ ಪರಿಗಣಿಸುವವರೆಗೂ ಹೋರಾಟ ಮುಂದುವರೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

 

Comments

Leave a Reply

Your email address will not be published. Required fields are marked *