ಕೌಟುಂಬಿಕ ಜಗಳ- ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ

ಹುಬ್ಬಳ್ಳಿ: ಮನೆಯಲ್ಲಿನ ಕೌಟುಂಬಿಕ ಸಮಸ್ಯೆ ಜಗಳದವರೆಗೆ ಹೋಗಿ, ಕೊನೆಗೆ ಕೋಪಗೊಂಡ ಮೈದುನ ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿರುವ ಪ್ರಕರಣ ಎಸ್.ಎಂ ಹುಬ್ಬಳ್ಳಿ (Hubballi) ಕೃಷ್ಣನಗರದಲ್ಲಿ ನಿನ್ನೆ (ನ.17) ತಡ ರಾತ್ರಿ ನಡೆದಿದೆ.

ಸಾಜೀದಾ ನಾಲಬಂದ (38) ಕೊಲೆಯಾದ ಮಹಿಳೆ. ಆಕೆಯ ಪತಿ ಮಹ್ಮದ್ ಹನೀಫ್ ಗಾಯಗೊಂಡಿದ್ದು, ಕೆಎಂಸಿಆರ್‌ಐಗೆ ದಾಖಲಿಸಲಾಗಿದೆ. ಮೈದುನ ನಾಸೀರ್ ನಾಲಬಂದ ಕೊಲೆ ಮಾಡಿದ ಆರೋಪಿ. ಇದನ್ನೂ ಓದಿ: ದನ ಮೇಯಿಸಲು ಹೋಗಿ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕರು – ಓರ್ವನ ಶವ ಪತ್ತೆ

ನಾಸೀರ್ ಮನೆಯಲ್ಲಿ ಅಣ್ಣ, ತಮ್ಮ ಅತ್ತಿಗೆ ಮೂವರು ವಾಸವಾಗಿದ್ದು, ಆಗಾಗ ಅವರ ನಡುವೆ ಜಗಳಗಳು ನಡೆಯುತ್ತಿತ್ತು. ಭಾನುವಾರ ಸಹ ಜಗಳ ನಡೆದಿದ್ದು, ಅದು ವಿಕೋಪಕ್ಕೆ ಹೋದ ಪರಿಣಾಮ ಮೈದುನ ನಾಸಿರ್ ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದಿದ್ದಾನೆ. ತೀವ್ರ ಗಾಯಗೊಂಡಿದ್ದ ಸಾಜೀದಾಳನ್ನು ಕೆಎಂಸಿಆರ್‌ಐಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಇದನ್ನೂ ಓದಿ: ಬಿಜೆಪಿಯಿಂದ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ : ಗಣಿಗ ರವಿ

ಸ್ಥಳಕ್ಕೆ ಕಮಿಷನರ್ ಎನ್ ಶಶಿಕುಮಾರ್, ಡಿಸಿಪಿ ಮಹಾನಿಂಗ ನಂದಗಾವಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಈ ಕುರಿತು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಷ್ಯಾ ಮೇಲೆ ಕ್ಷಿಪಣಿ ದಾಳಿಗೆ ಅಮೆರಿಕ ಒಪ್ಪಿಗೆ – ಉಕ್ರೇನ್‌ಗೆ ಜೋ ಬೈಡನ್‌ ಬಲ