ಚಿತ್ತಾರದ ಬೆಡಗಿ ಅಮೂಲ್ಯ ಮದುವೆ ಆಮಂತ್ರಣ ಪತ್ರಿಕೆ ರೆಡಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಮದುವೆಗೆ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಉದ್ಯಮಿ ಜಗದೀಶ್ ಆರ್ ಚಂದ್ರ ಅವರ ಜೊತೆ ಸಪ್ತಪದಿ ತುಳಿಯೋಕೆ ಚೆಲುವಿನ ಚಿತ್ತಾರದ ಬೆಡಗಿ ರೆಡಿಯಾಗಿದ್ದಾರೆ.

ಇದನ್ನೂ ಓದಿ: ಮದುವೆಯಾದ ಬಳಿಕ ಚಿತ್ರದಲ್ಲಿ ನಟನೆ ಮಾಡ್ತೀರಾ: ಅಮೂಲ್ಯ ಉತ್ತರ ಇದು
ಮೇ 12 ರಂದು ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಮದುವೆ ನಡೆಯಲಿದೆ. ಕುಟುಂಬಸ್ಥುರು ಹಾಗೂ ತೀರಾ ಆಪ್ತರಿಗಷ್ಟೇ ಮದುವೆಗೆ ಆಹ್ವಾನಿಸಲಾಗಿದ್ದು ಇದೀಗ ವಿವಾಹದ ಆಮಂತ್ರಣ ಪತ್ರಿಕೆ ರೆಡಿಯಾಗಿದೆ. ಈ ಆಮಂತ್ರಣ ಪತ್ರಿಕೆಯನ್ನ ಈಗಾಗ್ಲೇ ಜಗದೀಶ್ ಕುಟುಂಬ ತಮ್ಮ ಆಪ್ತರಿಗೆ ಬಂದು ಮಿತ್ರರಿಗೆ ಹಂಚುತ್ತಿದ್ದಾರೆ.

ಇದನ್ನೂ ಓದಿ: ನಟಿ ಅಮೂಲ್ಯ, ಜಗದೀಶ್ ಪ್ರಪೋಸಲ್ ಹೇಗಾಯ್ತು: ನಟ ಗಣೇಶ್ ದಂಪತಿ ಹೇಳ್ತಾರೆ

ಮಾರ್ಚ್ 6ರಂದು ಬೆಂಗಳೂರಿನ ಶ್ರೀ ಸಾಯಿ ಪ್ಯಾಲೇಸ್‍ನಲ್ಲಿ ಅಮೂಲ್ಯ ಹಾಗೂ ಜಗದೀಶ್ ಅವರ ನಿಶ್ಚಿತಾರ್ಥ ನೆರವೇರಿತ್ತು. ಅಮೂಲ್ಯ ಕೈ ಹಿಡಿಯಲಿರುವ ಜಗದೀಶ್ ಮಾಜಿ ಕಾರ್ಪೋರೇಟರ್ ಮಗ. ಲಂಡನ್‍ನಲ್ಲಿ ಎಂಬಿಎ ಮಾಡಿದ್ದು ಬೆಂಗಳೂರಿನ ಆರ್ ಆರ್ ನಗರ ನಿವಾಸಿಯಾಗಿದ್ದಾರೆ.

Comments

Leave a Reply

Your email address will not be published. Required fields are marked *