ಇಂದು ಸಿಎಂ ಸಿದ್ದರಾಮಯ್ಯ ದುಬೈಗೆ ಪ್ರಯಾಣ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ದುಬೈಗೆ ತೆರಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಏರ್‍ಪೋರ್ಟ್‍ನಿಂದ ತೆರಳಲಿದ್ದು, ಭಾನುವಾರ ಸಂಜೆ ವಾಪಸ್ ಆಗಲಿದ್ದಾರೆ. ಮೂರು ದಿನಗಳ ಕಾಲ ದುಬೈನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ದುಬೈಗೆ ತೆರಳಿ ಇಂದು ವಿಶ್ರಾಂತಿ ಪಡೆದು, ನಾಳೆ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ಅಬುಧಾಬಿ ಪ್ರವಾಸ ಕೈಗೊಳ್ಳಲಿದ್ದು, ಶೇಕ್ ಜೈದಾ ಮಸೀದಿಗೆ ಭೇಟಿ ನೀಡಲಿದ್ದಾರೆ.

ಶನಿವಾರ ಸಂಜೆ ಅಲ್ಲಿನ ಉದ್ಯಮಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯ ನಂತರ ಭಾನುವಾರ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.

 

Comments

Leave a Reply

Your email address will not be published. Required fields are marked *