ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅನುಷ್ಕಾ ಶೆಟ್ಟಿ

ಮಂಗಳೂರು: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ತನ್ನ ಆರಾಧ್ಯ ದೇವರಾದ ಮಹಾಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಅನುಷ್ಕಾ ತನ್ನ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆದರು. ಮಹಾಲಿಂಗೇಶ್ವರನ ದರ್ಶನದ ಬಳಿಕ ದೇವಸ್ಥಾನದ ನಂದಿಯ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು.

ಸ್ವತ ಪುತ್ತೂರಿನವರೇ ಆದ ಅನುಷ್ಕಾ ಮಂಗಳವಾರ ಸಂಜೆ ಉರುವಾಲಿನ ತಮ್ಮ ಮನೆಯಲ್ಲಿ ನಡೆಯುವ ದೈವವತಂಬಿಲ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಅನುಷ್ಕಾ ಶೆಟ್ಟಿ ಅವರಿಗೆ ಅಣ್ಣ ಗುಣರಂಜನ್ ಶೆಟ್ಟಿ, ತಾಯಿ ಪ್ರಪುಲ್ಲ ಶೆಟ್ಟಿ ಸೇರಿದಂತೆ ಬಂಧುಗಳು ಸಾಥ್ ನೀಡಿದ್ದರು.

ಇದನ್ನೂ ಓದಿ: ಕನ್ನಡ ಸಿನಿಮಾಗಳಲ್ಲಿ ನಟಿಸುತ್ತೀರಾ? ಅಭಿಮಾನಿಯ ಪ್ರಶ್ನೆಗೆ ಅನುಷ್ಕಾ ಶೆಟ್ಟಿ ಕನ್ನಡದಲ್ಲಿ ಉತ್ತರಿಸಿದ್ದು ಹೀಗೆ

Comments

Leave a Reply

Your email address will not be published. Required fields are marked *