ಪತ್ನಿ ಮೇಲೆ ರೇಪ್ ಆಗಿದ್ದಕ್ಕೆ ಮನನೊಂದ ಪತಿ ಆತ್ಮಹತ್ಯೆ!

ರಾಮನಗರ: ಪತ್ನಿ ಮೇಲೆ ನಡೆದಿದ್ದ ಅತ್ಯಾಚಾರದಿಂದ ಮನನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಇಗ್ಗಲೂರು ಗ್ರಾಮದ ನಿವಾಸಿ ಸಿದ್ದೇಶ್ (28) ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. ಕಳೆದ ಎರಡು ದಿನಗಳ ಹಿಂದೆ ಸಿದ್ದೇಶ್ ಪತ್ನಿಯ ಮೇಲೆ ಅತ್ಯಾಚಾರ ನಡೆದಿತ್ತು. ನೆರೆಮನೆಯ ಗಿರೀಶ್ ಎಂಬಾತ ಸಿದ್ದೇಶ್ ಪತ್ನಿ ಮೇಲೆ ಅತ್ಯಾಚಾರ ಎಸಗಿದ್ದ. ಪ್ರಕರಣದ ಸಂಬಂಧ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಅಕ್ಕೂರು ಪೊಲೀಸರು ಬಂಧಿಸಿದ್ದಾರೆ.

ಇನ್ನು ಪತ್ನಿ ಮೇಲಿನ ಅತ್ಯಾಚಾರದಿಂದ ಮನನೊಂದಿದ್ದ ಸಿದ್ದೇಶ್ ತೋಟದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರ ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಪ್ಲೀಸ್ ಅಳ್ಬೇಡಿ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಪತ್ನಿ ಕೊನೆಗೂ ಪ್ರತ್ಯಕ್ಷ!

Comments

Leave a Reply

Your email address will not be published. Required fields are marked *