ಹೆತ್ತವರ ಬುದ್ಧಿವಾದದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಹೆತ್ತವರು ಚೆನ್ನಾಗಿ ಓದುವಂತೆ ಬುದ್ಧಿವಾದ ಹೇಳಿದಕ್ಕೆ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಫುರದ ಪ್ರಶಾಂತ ನಗರದಲ್ಲಿ ನಡೆದಿದೆ.

17 ವರ್ಷದ ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದ ಈಕೆ ಪಿಯುಸಿ ಫೇಲ್ ಆಗಿದ್ದಳು.ಹೀಗಾಗಿ ಪೋಷಕರು ಪಿಯುಸಿ ಪೂರಕ ಪರೀಕ್ಷೆಗಾದರೂ ಚೆನ್ನಾಗಿ ಓದಿ ಪಾಸಾಗುವಂತೆ ಬುದ್ಧಿವಾದ ಹೇಳಿದ್ದರು. ಇದೇ ವಿಚಾರಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈ ಸಂಬಂಧ ಚಿಕ್ಕಬಳ್ಳಾಪುರ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *