ಬಾಸುಂಡೆ ಬರುವಂತೆ 6ನೇ ತರಗತಿ ವಿದ್ಯಾರ್ಥಿಗೆ ಹೊಡೆದ ಶಿಕ್ಷಕ

ನೆಲಮಂಗಲ: ಹುಷಾರಿಲ್ಲದ್ದಕ್ಕೆ ಶಾಲೆಯ ಕೊಠಡಿಯಲ್ಲಿ ಮಲಗಿದ್ದ ಕಾರಣಕ್ಕೆ ಸಿಟ್ಟಿಗೆದ್ದ ಶಿಕ್ಷಕ ವಿದ್ಯಾರ್ಥಿಯ ಮೈಯಲ್ಲಿ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಮಾದರಿ ಸಕಾ9ರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ನರಸಾಪುರ ಗ್ರಾಮದ ಜಗದೀಶ್ ಹಾಗೂ ಸರಸ್ವತಿ ಎಂಬವರ ಮಗ ಕುಮಾರ್ ಗೆ ಶಿಕ್ಷಕ ರೇವಣ್ಣಸಿದ್ದಯ್ಯ ಬಾಸುಂಡೆ ಬರುವಂತೆ ಹೊಡೆದಿದ್ದಾರೆ.

ಕಳೆದ ನಾಲ್ಕು ದಿನದಿಂದ ಕುಮಾರ್ ಜ್ವರದಿಂದ ಬಳಲುತಿದ್ದು, ಶಿಕ್ಷಕ ಪಾಠ ಮಾಡುವಾಗ ಶಾಲೆಯ ಕೊಠಡಿಯಲ್ಲಿ ಮಲಗಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ರೇವಣ್ಣಸಿದ್ದಯ್ಯ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿ ಹಾಗೂ ಪೋಷಕರು ಆರೋಪಿಸಿದ್ದಾರೆ.

ಈ ಬಗ್ಗೆ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷಕನ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Comments

Leave a Reply

Your email address will not be published. Required fields are marked *