ಲವ್ ಫೇಲಾಗಿದ್ದಕ್ಕೆ ಸಾಯೋಕೆ ಈತ ಏನ್ಮಾಡಿದ ಗೊತ್ತಾ?

ಹೈದರಾಬಾದ್: ಪ್ರೇಮ ವೈಫಲ್ಯದಿಂದ ಬೇಸತ್ತ ಯುವಕನೊಬ್ಬ ತನಗೆ ತಾನೇ ಉಸಿರುಗಟ್ಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕಟಪಲ್ಲಿಯಲ್ಲಿ ನಡೆದಿದೆ.

ಕುಕಟಪಲ್ಲಿ ಹೌಸಿಂಗ್ ಬೋರ್ಡ್ ಕಾಲೋನಿಯ ಮಲೇಷ್ಯನ್ ಟೌನ್ ಶಿಪ್ ನಿವಾಸಿ ದಿನೇಶ್ ಮೃತ ದುರ್ದೈವಿ. ತನ್ನ ಕಾರಿನಲ್ಲೇ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮ ವೈಫಲ್ಯದಿಂದ ನೊಂದಿದ್ದ ದಿನೇಶ್ ಕಾರಿನ ಹಿಂಭಾಗದ ಸೀಟಿನಲ್ಲಿ ಕೂತು ಮೊದಲು ತನ್ನ ಮುಖಕ್ಕೆ ಪ್ಲಾಸ್ಟಿಕ್ ಕವರ್ ಹಾಕಿಕೊಂಡಿದ್ದಾನೆ. ಬಳಿಕ ಕಾರಿನ ಗಾಜುಗಳನ್ನೆಲ್ಲಾ ಕ್ಲೋಸ್ ಮಾಡಿ ಗ್ಯಾಸ್ ಪೈಪ್ ಕತ್ತರಿಸಿಕೊಂಡಿದ್ದಾನೆ. ಇದರಿಂದಾಗಿ ಉಸಿರುಗಟ್ಟಿ ದಿನೇಶ್ ಸಾವನ್ನಪ್ಪಿದ್ದಾನೆ.

ಕಾರಿನಲ್ಲೇ ಸೂಸೈಡ್ ನೋಟ್ ಪತ್ತೆಯಾಗಿದ್ದು ಪ್ರೇಮ ವೈಫಲ್ಯದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

 

Comments

Leave a Reply

Your email address will not be published. Required fields are marked *