ತಾಕತ್ತಿದ್ದರೆ ಬಿಜೆಪಿ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ: ಬಿಎಸ್‍ವೈಗೆ ವಿನಯ್ ಕುಲಕರ್ಣಿ ಸವಾಲು

ಧಾರವಾಡ: ಬಸವಣ್ಣನವರ ತತ್ವ ಸಿದ್ಧಾಂತಗಳ ಮೇಲೆ ನಮ್ಮ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ವಿನಯ ಕುಲಕರ್ಣಿ ಅವರು ಹೇಳಿದ್ದಾರೆ.

ನಗರದಲ್ಲಿ ಸಿರಿ ಧಾನ್ಯ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರನ್ನು ಸಮಾನತೆಯಿಂದ ಕಾಣುವ ಪಕ್ಷ ಅಂದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ಬಿ ಎಸ್ ಯಡಿಯೂರಪ್ಪ ಅವರಿಗೆ ತಾಕತ್ತಿದ್ದರೆ ಬಿಜೆಪಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಹಾಕಿ ತೋರಿಸಲಿ ಎಂದು ಅವರು ಸವಾಲು ಹಾಕಿದರು.

ಒಂದು ಸಮಾಜದ ಮುಖಂಡರು ಎನಿಸಿಕೊಂಡ ಬಿಎಸ್‍ವೈ ಸಮುದಾಯದ ಬಗ್ಗೆ ಗೌರವದಿಂದ ಮಾತನಾಡಬೇಕು. ನೂರಾರು ಜನ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ನಮಗೆ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಬೇಕೆ ಬೇಕು ಎಂದು ಹೇಳಿದರು.

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಯಾವುದೇ ರಾಜಕಾರಣ ಇಲ್ಲ. ಕೆಲವರು ರಾಜಕೀಯ ಲಾಭಕ್ಕೆ ಸ್ವತಂತ್ರ ಧರ್ಮ ಮಾಡಲಾಗುತ್ತಿದೆ ಎನ್ನುತ್ತಿದ್ದಾರೆ. ಆದರೆ ಧರ್ಮಕ್ಕೆ ಲಾಭವಾಗಲಿದೆ ಹೊರತು ರಾಜಕೀಯ ಲಾಭವಿಲ್ಲ ಎಂದು ಹೇಳುವ ಮೂಲಕ ಸರ್ಕಾರದ ನಡೆಯನ್ನು ಸಮರ್ಥಿಸಿದರು.

ಪೇಜಾವರ ಶ್ರೀಗಳಿಗೆ ಈ ವಿಷಯ ಸಂಬಂಧವಿಲ್ಲ.ಈ ವಿಚಾರದಲ್ಲಿ ಅವರು ಯಾಕೆ ಮಾತನಾಡುತ್ತಿದ್ದಾರೆ ಎಂದು ಸಚಿವ ವಿನಯ ಕುಲಕರ್ಣಿ ಪ್ರಶ್ನಿಸಿದರು.

ಇದನ್ನೂ ಓದಿ: ಮೋದಿ, ಶಾ, ಬಿಎಸ್‍ವೈ ಕಟ್ಟಿಹಾಕಲು ಸಿಎಂ ಕಟ್ಟುತ್ತಿದ್ದಾರೆ LDMK ಸೇನೆ!

Comments

Leave a Reply

Your email address will not be published. Required fields are marked *