ರಂಭಾಪುರಿ ಶ್ರೀಗಳ ವಿರುದ್ಧ ಭುಗಿಲೆದ್ದ ಆಕ್ರೋಶ – ಬೆಂಗ್ಳೂರಲ್ಲಿ ರಾತ್ರೋರಾತ್ರಿ ಪ್ರತಿಭಟನೆ

– ಇತ್ತ ರಂಭಾಪುರಿ ಶ್ರೀಗಳ ಬೆಂಬಲಿಗರಿಂದಲೂ ಹೋರಾಟ

ಬೆಂಗಳೂರು: ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅನೈತಿಕತೆ ಪ್ರಶ್ನೆ ಮಾಡಿ ಅವರ ವಿರುದ್ಧ ಗಂಭೀರ ಆರೋಪ ಹೊರಿಸಿರುವ ರಂಭಾಪುರಿ ಶ್ರೀಗಳ ವಿರುದ್ಧ ಮಾತೆಯ ಭಕ್ತರು ಬೆಂಗಳೂರಿನ ಬಸವ ಮಂಟಪದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಮಾತೆ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಿ ಅವರ ತೇಜೋವಧೆಗೆ ರಂಭಾಪುರಿ ಶ್ರೀಗಳು ಯತ್ನಿಸುತ್ತಿದ್ದಾರೆ ಅಂತ ಮಾತೆ ಭಕ್ತರು ಕಿಡಿಕಾರಿದ್ರು. ರಂಭಾಪುರಿ ಶ್ರೀಗಳಿಗೆ ಧಿಕ್ಕಾರ ಕೂಗಿ, ಮೊಬೈಲ್‍ನಲ್ಲಿದ್ದ ರಂಭಾಪುರಿ ಶ್ರೀಗಳ ಫೋಟೋಗೆ ಚಪ್ಪಲಿಯಿಂದ ಹೊಡೆದು, ರಸ್ತೆ ಮಧ್ಯೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು.

ಅಲ್ಲದೇ ರಂಭಾಪುರಿ ಶ್ರೀಗಳು ಬಹಿರಂಗವಾಗಿ ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ರು. ಇಂದು ಬೆಳಗ್ಗೆ 10.30ಕ್ಕೆ ಮೌರ್ಯ ಸರ್ಕಲ್‍ನಲ್ಲಿ ಪ್ರತಿಭಟಿಸಲಿದ್ದಾರೆ.

ಇತ್ತ ಮಾತೆ ಮಹಾದೇವಿ ಮತ್ತು ಬಸವ ಪೀಠದ ಸದಸ್ಯರು ರಂಭಾಪುರಿ ಶ್ರೀಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಅಂತಾ ಆರೋಪಿಸಿ ಬೆಂಗಳೂರಲ್ಲಿ ರಂಭಾಪುರಿ ಶ್ರೀಗಳ ಬೆಂಬಲಿಗರು ಪ್ರತಿಭಟಿಸಿದ್ದಾರೆ. ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ವೃತ್ತದಲ್ಲಿ ಪ್ರತಿಭಟಿಸಿ ಮಾತೆ ಮಹಾದೇವಿ ವಿರುದ್ಧ ಧಿಕ್ಕಾರ ಕೂಗಿದ್ರು.

ಮಾತೆ ಮಹಾದೇವಿ ಹಾಗೂ ಲಿಂಗಾನಂದರ ನಡುವಿನ ಸಂಬಂಧವನ್ನು ರಂಭಾಪುರಿ ಶ್ರೀಗಳು ಅನುಮಾನದ ದೃಷ್ಟಿಯಿಂದ ನೋಡಿದ್ದಾರೆ. ಅಲ್ಲದೆ, ಈ ಸಂಬಂಧ ಪೂರಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಮಾತೆ ಮಹಾದೇವಿ ಹಾಗೂ ಲಿಂಗಾನಂದ ನಡುವಿನ ಸಂಬಂಧ ಎಷ್ಟು ಅನೈತಿಕಯಿಂದ ಕೂಡಿದೆ ಎಂಬುದಕ್ಕೆ ಸ್ವತಃ ಲಿಂಗಾನಂದರೇ ಶಿಷ್ಯರೊಬ್ಬರಿಗೆ ಬರೆದ ರಹಸ್ಯ ಪತ್ರವನ್ನು ಅವರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ, ಮಾತೆ ಮಹಾದೇವಿ ಚಾರಿತ್ರ್ಯಧ ಬಗ್ಗೆ ಪ್ರಸ್ತಾಪಿಸಲಾಗಿದೆ. ಪಬ್ಲಿಕ್ ಟಿವಿಗೆ ಈ ಪತ್ರಗಳು ಸಿಕ್ಕಿದ್ದು ಅವುಗಳನ್ನು ಇಲ್ಲಿ ನೀಡಲಾಗಿದೆ.

Comments

Leave a Reply

Your email address will not be published. Required fields are marked *