ಸೂಪರ್ ಸ್ಟಾರ್ ಉಪೇಂದ್ರಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್

ಬೆಂಗಳೂರು: ಸ್ಯಾಂಡಲ್‍ವುಡ್ ಸೂಪರ್ ಸ್ಟಾರ್ ಉಪೇಂದ್ರ ಅವರಿಗೆ ಜಮೀನು ವಿವಾದದಲ್ಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಉಪೇಂದ್ರ ಅವರು ಬೆಂಗಳೂರು ದಕ್ಷಿಣ ತಾಲೂಕು ಬ್ಯಾಲಾಳು ಗ್ರಾಮದಲ್ಲಿ ಖರೀದಿ ಮಾಡಿದ್ದ 17 ಎಕರೆ 10 ಗುಂಟೆ ಜಮೀನು ಕಾನೂನುಬದ್ಧ ಅಂತ ನ್ಯಾಯಾಲಯ ಹೇಳಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದ್ದು ಸರ್ಕಾರದ ಮೇಲ್ಮನವಿಯನ್ನು ಹೈಕೋರ್ಟ್ ವಜಾ ಮಾಡಿದೆ.

2005 ರಲ್ಲಿ ಉಪೇಂದ್ರ ಅವರು ಖರೀದಿ ಮಾಡಿದ್ದ ಜಮೀನು ಕಾನೂನುಬದ್ಧವಾಗಿಲ್ಲ ಅಂತ ರಾಜ್ಯ ಸರ್ಕಾರ ಅದನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚನೆ ನೀಡಿತ್ತು. ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಉಪೇಂದ್ರ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಸಿದ್ದರು.

ಇದನ್ನೂ ಓದಿ: ಸೈನಿಕರನ್ನು ಬೆಂಬಲಿಸಿ ಬೀದಿಗೆ ಇಳಿದು ನಾವು ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು: ಉಪ್ಪಿ ಪ್ರಶ್ನೆ

Comments

Leave a Reply

Your email address will not be published. Required fields are marked *