ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ-ಇಂದು ಮಠಾಧೀಶರು, ಮುಖಂಡರ ಸಭೆ

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಬಗ್ಗೆ ಒಮ್ಮತ ಮೂಡಿಸುವ ಸಲುವಾಗಿ ಇವತ್ತು ಲಿಂಗಾಯತ ಸ್ವಾಮೀಜಿಗಳು ಹಾಗೂ ಮುಖಂಡರ ಸಭೆ ನಡೆಯಲಿದೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದೆ.

ಮೊದಲು ವೀರಶೈವ ಮತ್ತು ಲಿಂಗಾಯತ ಎರಡು ಬೇರೆ ಬೇರೆಯೇ ಎಂಬ ಗೊಂದಲ ಬಗೆಹರಿಸಿ. ಬಳಿಕ ಪ್ರಸ್ತಾವನೆ ಸಲ್ಲಿಸಿದ್ರೆ ಪ್ರತ್ಯೇಕ ಧರ್ಮದ ಮಾನ್ಯತೆ ಸಂಬಂಧ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಅಂತಾ ಸಿಎಂ ಹೇಳಿದ್ದಾರೆ.

ಸಭೆಯಲ್ಲಿ ಲಿಂಗಾಯತ ಹಾಗೂ ವೀರಶೈವ ಗೊಂದಲ ಪರಿಹಾರದ ಬಗ್ಗೆ ಸಾಕಷ್ಟು ಚರ್ಚೆ ನಡೆಯಲಿದೆ. ಈ ಮೂಲಕ ಕಾಂಗ್ರೆಸ್ ಪರ ವಾತಾವರಣ ಮೂಡಿಸಲು ಸಿಎಂ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಲಿಂಗಾಯತ ಸಮುದಾಯದ ಬೇಡಿಕೆ ಈಡೇರಿಕೆಗೆ ಸಿಎಂ ಆಸಕ್ತಿ ಹೊಂದಿದ್ದಾರೆ.

ಪ್ರತ್ಯೇಕ ಧರ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಅನ್ನೋ ಸಂದೇಶ ರವಾನೆಯಾಗಬೇಕು. ಕಾಂಗ್ರೆಸ್ ಪರ ಪೂರಕ ವಾತಾವರಣ ನಿರ್ಮಾಣವಾಗ್ಬೇಕು ಎಂದು ಪ್ರಭಾವಿ ಲಿಂಗಾಯತ ಸಚಿವರು, ಮುಖಂಡರಿಗೆ ಸಿಎಂ ಸೂಚಿಸಿದ್ದಾರೆ. ಆದ್ರೆ ಬಿಜೆಪಿ ನಾಯಕರೂ ಪ್ರತ್ಯೇಕ ಧರ್ಮದ ಮಾನ್ಯತೆಯ ಕ್ರೆಡಿಟ್ ನಮಗೆ ಸಿಗಬೇಕು ಅಂತಾ ವಾದಿಸ್ತಿರೋ ಹಿನ್ನೆಲೆಯಲ್ಲಿ ಸಭೆಯಲ್ಲಿ ಗೊಂದಲ ಸೃಷ್ಟಿಯಾಗೋ ಸಾಧ್ಯತೆಗಳಿವೆ.

 

Comments

Leave a Reply

Your email address will not be published. Required fields are marked *