ಮಂಗಳೂರು: ರಾಜ್ಯದಲ್ಲೇ ಭಾರೀ ಸಂಚಲನ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಶಫೀ, ಷರೀಫ್, ಖಲಂದರ್ ಎಂಬುವುದಾಗಿ ಗುರುತಿಸಲಾಗಿದ್ದು, ಇವರ ಬಗ್ಗೆ ಪೂರ್ಣ ಮಾಹಿತಿ ತಿಳಿದುಬಂದಿಲ್ಲ.
ಏನಿದು ಪ್ರಕರಣ?: ಕಳೆದ ಜುಲೈ 4 ರಂದು ರಾತ್ರಿ ಬಂಟ್ವಾಳ ತಾಲೂಕಿನ ಬಿಸಿರೋಡ್ ಬಳಿ ತನ್ನ ಲಾಂಡ್ರಿಯ ಬಾಗಿಲು ಹಾಕಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ಶರತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಜುಲೈ 7 ರಂದು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಆ ಬಳಿಕ ರಾಜ್ಯಾದ್ಯಂತ ಸಾಕಷ್ಟು ಹೋರಾಟಗಳು ನಡೆದಿತ್ತು.
ಆ ಬಳಿಕ ಪೊಲೀಸರು ಸುಮಾರು 7 ತನಿಖಾ ತಂಡಗಳನ್ನು ರಚಿಸಿ ಬೇರೆ ಬೇರೆ ಕಡೆಗಳಲ್ಲಿ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು. ಅಲ್ಲದೇ ಪೊಲೀಸರಿಗೆ ಆರೋಪಿಗಳನ್ನು ಪತ್ತೆಹಚ್ಚುವುದು ಸವಾಲಾಗಿತ್ತು. ಘಟನೆ ಬಳಿಕ ಮಂಗಳೂರು, ಬಂಟ್ವಾಳ, ಬಿಸಿರೋಡಿನಲ್ಲಿ ಹಲವು ದಿನ 144 ಸೆಕ್ಷನ್ ಜಾರಿಯಾಗಿತ್ತು. ಸದ್ಯ ಇದೀಗ ಮೂವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.








https://www.youtube.com/watch?v=o40hIeKFh8E















Leave a Reply