ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಮೇಲೆ ಬಿಜೆಪಿಯವರೇ ಒತ್ತಡ ಹಾಕಿರಬಹುದು: ಎಚ್.ಆಂಜನೇಯ

ಚಿತ್ರದುರ್ಗ: ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಮೇಲೆ ಬಿಜೆಪಿಯವರೇ ಒತ್ತಡ ಹಾಕಿರಬಹುದು ಎನ್ನುವ ಸಂಶಯವಿದೆ ಎಂದು ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ಜಿಲ್ಲೆಯ ಪಂಚಾಯತ್‍ರಾಜ್ ರಜತ ಮಹೋತ್ಸವದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ಸಿಎಂ ಆಯ್ಕೆಯಾಗಲಿದೆ. ಈಗಾಗಲೇ ಸಿ ಫೋರ್ ಸಮೀಕ್ಷೆ ಬಂದಿದೆ. ನಮ್ಮ ಪಕ್ಷದ ಸಮೀಕ್ಷೆಯಲ್ಲಿ ನಾವು 150 ಸ್ಥಾನ ಗೆಲ್ಲುತ್ತೇವೆ ಎನ್ನುವ ಫಲಿತಾಂಶ ಬಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಡಿನೋಟಿಫೈ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಬಿಎಸ್‍ವೈ ವಿರುದ್ಧ ಸುಳ್ಳು ಹೇಳಲು ಭೂಸ್ವಾಧೀನಾಧಿಕಾರಿಗೆ ಒತ್ತಡ?

ಬಿಜೆಪಿಯವರು ಮಿಷನ್ 150 ಎನ್ನುತ್ತಿದ್ದಾರೆ. ಅದ್ಯಾವ ಮಿಷನ್ ನಾವು ನೋಡುತ್ತೇವೆ. ಮುಂದಿನ ಸರ್ಕಾರ ಬಿಜೆಪಿ ರಚಿಸಲು ಮತ ಹಾಕೋದು ಜನ. ಅವರೇ ಹಾಕಿಸಿಕೊಳ್ಳಲು ಬರಲ್ಲ. ನಾವು ನಾಲ್ಕು ವರ್ಷಗಳ ಕಾಲ ಬಡವರಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಜನ ನಮ್ಮ ಕೈ ಹಿಡಿಯುತ್ತಾರೆ. ಐಟಿ ರೇಡ್ ಆದ ತಕ್ಷಣ ಅಪರಾಧಿ ಆಗಲ್ಲ. ಬಿಜೆಪಿಯವರು ಜೈಲಿಗೆ ಹೋಗಿದ್ದಾರೆ. ದ್ವೇಷ ರಾಜಕಾರಣ ನಾವು ಮಾಡಲ್ಲ. ಅಭಿವೃದ್ಧಿ ಮಾಡುವುದೇ ನಮ್ಮ ಗುರಿ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಎಸಿಬಿ ದುರುಪಯೋಗ: ಸಿಎಂ ವಿರುದ್ಧ ಬಿಜೆಪಿಯಿಂದ ಭಾರೀ ಪ್ರತಿಭಟನೆ 

Comments

Leave a Reply

Your email address will not be published. Required fields are marked *