ಕರ್ನಾಟಕದ ಗೋರಖ್‍ಪುರ ಆಗ್ತಿದೆ ಕೋಲಾರದ ಜಿಲ್ಲಾಸ್ಪತ್ರೆ!

ಕೋಲಾರ: ಆರೋಗ್ಯ ಸಚಿವ ರಮೇಶ್‍ಕುಮಾರ್ ಅವರ ತವರು ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ಜಿಲ್ಲಾಸ್ಪತ್ರೆಯಲ್ಲಿ 10ಕ್ಕೂ ಹೆಚ್ಚು ಜನ ಮಕ್ಕಳು ಬಲಿಯಾಗಿದ್ದಾರೆ.

ಬರದ ನಾಡು ಕೋಲಾರ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ, ಮಕ್ಕಳ ಬೆಳವಣಿಗೆ ಕುಂಠಿತ, ಪೋಷಕಾಂಶಗಳ ಕೊರತೆ, ತೂಕ ಕಡಿಮೆ ಸೇರಿ ವಿವಿಧ ಅನಾರೋಗ್ಯದಿಂದ ಶಿಶುಗಳು ಸಾವನ್ನಪ್ಪಿವೆ.

ಸೋಮವಾರ ಒಂದೇ ದಿನ ಮೂರು ಹಸುಗೂಸುಗಳ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿರುವ ಬಾಣಂತಿಯರು ಹಾಗೂ ಮಕ್ಕಳ ಪೋಷಕರಲ್ಲಿ ಆತಂಕ ಶುರುವಾಗಿದೆ. ಹಾಗಾಗಿ ಖಾಸಗಿ ಆಸ್ಪತ್ರೆಗೆ ಹೋಗಲು ಬಾಣಂತಿ ಮಹಿಳೆಯರು ಹಾಗೂ ಪೋಷಕರು ಚಿಂತನೆ ನಡೆಸಿದ್ದು, ಆಸ್ಪತ್ರೆ ವೈದ್ಯರ ವಿರುದ್ಧ ನವಜಾತ ಶಿಶುಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

Comments

Leave a Reply

Your email address will not be published. Required fields are marked *