ಸಿಎಂ ಸಿದ್ದರಾಮಯ್ಯ ಚೈಲ್ಡ್ ಆಗಿ ವರ್ತಿಸ್ತಿದ್ದಾರೆ: ಎಚ್ ವಿಶ್ವನಾಥ್

ಕೊಪ್ಪಳ: ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಚೈಲ್ಡ್ ಆಗಿ ವರ್ತಿಸುತ್ತಾರೆ. ಇಡೀ ಉತ್ತರ ಕರ್ನಾಟಕವನ್ನು ಸರ್ಕಾರ ಹಾಳು ಮಾಡಿದೆ ಎಂದು ಜೆಡಿಎಸ್ ಮುಖಂಡ ಎಚ್ ವಿಶ್ವನಾಥ್ ಅವರು ವಾಗ್ದಾಳಿ ನಡೆಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೊಪ್ಪಳ ಸಣ್ಣ ನೀರಾವರಿ ಇಲಾಖೆಯಲ್ಲಿ ಕೋಟ್ಯಾಂತರ ರೂ. ಭ್ರಷ್ಟಾಚಾರ ನಡೆದಿದೆ. ಸಿದ್ದರಾಮಯ್ಯ ಅವರದು ಭ್ರಷ್ಟ ಸರ್ಕಾರ ಎಂದು ಟೀಕಿಸಿದರು.

ರಾಜ್ಯ ಸರ್ಕಾರದ ಪ್ರಾಯೋಜಿತವಾಗಿ ಸಿ ಫೋರ್ ಸಮೀಕ್ಷೆ ನಡೆಸಿದೆ. ಅಪೌಷ್ಠಿಕತೆಯಲ್ಲಿ ಕೊಪ್ಪಳ ದೇಶದಲ್ಲೇ ಮೊಲದ ಸ್ಥಾನದಲ್ಲಿದೆ. ಆದರೆ ಇದು ಮುಖ್ಯಮಂತ್ರಿಗಳಿಗೆ ಹಾಗೂ ಆರೋಗ್ಯ ಸಚಿವರಿಗೆ ಕಾಣುತ್ತಿಲ್ಲ. ವೈದ್ಯರ ಕೊರತೆಯಿಂದ ಮಕ್ಕಳು ಸಾಯುತ್ತಿವೆ. ಸರ್ಕಾರ ಇದೆಯೋ ಅಥವಾ ಇಲ್ಲವೋ ಎಂದು ತಿಳಿಯಬೇಕಿದೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *