ಕಾಲೇಜಿನ ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬಳ್ಳಾರಿ: ಕಾಲೇಜಿನ ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆಯ ಶಂಕರ್ ಆನಂದಸಿಂಗ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ದ್ವೀತಿಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರೋ ಅನ್ನಪೂರ್ಣ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ.

ಕಾಲೇಜಿನ 2 ಅಂತಸ್ತಿನ ಬಿಲ್ಡಿಂಗ್‍ನಿಂದ ಜಿಗಿದು ಅನ್ನಪೂರ್ಣ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕಟ್ಟಡದ ಮೇಲಿಂದ ವಿದ್ಯಾರ್ಥಿನಿ ಕೇಳಗೆ ಬಿಳುತ್ತಿದ್ದಂತೆ ಹೊಸಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಆದರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ ಅನ್ನೋದು ಇನ್ನೂ ತಿಳಿದುಬಂದಿಲ್ಲ.

 

Comments

Leave a Reply

Your email address will not be published. Required fields are marked *