ಇಂದಿರಾ ಆಯ್ತು.. ಅಪ್ಪಾಜಿ ಆಯ್ತು ಈಗ ಶೆಟ್ಟಿ ಕ್ಯಾಂಟೀನ್-ಬೆಳಗ್ಗೆ ಇಲ್ಲಿ ಉಪಹಾರ ಉಚಿತ

ಕೋಲಾರ: ಕರ್ನಾಟಕದಲ್ಲಿ ಕ್ಯಾಂಟೀನ್ ಪಾಲಿಟಿಕ್ಸ್ ಸದ್ದು ಜೋರಾಗಿದೆ. ಕಾಂಗ್ರೆಸ್ ಇಂದಿರಾ ಕ್ಯಾಂಟೀನ್ ಆಯ್ತು. ಜೆಡಿಎಸ್‍ನ ಅಪ್ಪಾಜಿ ಕ್ಯಾಂಟೀನ್ ಆಯ್ತು. ಈಗ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿ ಕ್ಯಾಂಟೀನ್ ಶುರು ಮಾಡಿದ್ದಾರೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕು ಟೇಕಲ್ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಕೃಷ್ಣಯ್ಯ ಶೆಟ್ಟಿ ಅವರು, ತಮ್ಮದೇ ಹೆಸರಿನಲ್ಲಿ ಕ್ಯಾಂಟೀನ್ ಶುರು ಮಾಡಿದ್ದಾರೆ. ಕ್ಷೇತ್ರದಿಂದ ದೂರ ಉಳಿದಿದ್ದ ಕೃಷ್ಣಯ್ಯಶೆಟ್ಟಿ ಈಗ ಎಲೆಕ್ಷನ್ ಹೊತ್ತಲ್ಲಿ ಟಿಕೆಟ್ ಪಡೆಯೋಕೆ ಹೊಸ ಪ್ಲ್ಯಾನ್ ಮಾಡಿದ್ದಾರೆ. ಪ್ರತಿ ದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆವರೆಗೆ ಉಚಿತವಾಗಿ ಉಪಹಾರ ನೀಡುತ್ತಿದ್ದಾರೆ. ಸದ್ಯ ಮಾಲೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿರುವ ಕೃಷ್ಣಯ್ಯ ಶೆಟ್ಟಿ ಈಗ ಮತ್ತೆ ಕ್ಷೇತ್ರದಲ್ಲಿ ಅಖಾಡಕ್ಕಿಳಿದಿದ್ದಾರೆ.

 

ಇನ್ನು ಕೃಷ್ಣಯ್ಯಶೆಟ್ಟಿಯವರು ಹೀಗೆ ಟೇಕಲ್ ರೈಲು ನಿಲ್ದಾಣದ ಬಳಿ ಕ್ಯಾಂಟೀನ್ ಆರಂಭ ಮಾಡುತ್ತಿರುವುದು ಸ್ಥಳೀಯ ಕೆಲವು ಹೋಟೆಲ್ ಮಾಲೀಕರುಗಳಿಂದ ಅಸಮದಾನ ವ್ಯಕ್ತವಾಗಿದೆ. ಹಲವಾರು ವರ್ಷಗಳಿಂದ ಟೇಕಲ್ ರೈಲು ನಿಲ್ದಾಣದ ಬಳಿ ಸುಮಾರು ಐದಾರು ಕುಟುಂಬಗಳು ಸಣ್ಣ ಪುಟ್ಟ ಹೋಟೆಲ್ ನಡೆಸಿಕೊಂಡು ಜೀವನ ನಡೆಸುತ್ತಿದ್ದಾರೆ. ಆದ್ರೆ ಈಗ ಕೃಷ್ಣಯ್ಯ ಶೆಟ್ಟಿಯವರು ಉಚಿತ ಶೆಟ್ಟಿ ಕ್ಯಾಂಟೀನ್ ಆರಂಭ ಮಾಡಿರುವುದು ಹೋಟೆಲ್‍ಗಳಿಗೆ ಬೀಗ ಹಾಕುವ ಪರಿಸ್ಥಿತಿ ಬಂದಿದೆ.

 

 

 

Comments

Leave a Reply

Your email address will not be published. Required fields are marked *