ಮಳೆಯಿಂದ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ದಂಪತಿ ಸಾವು

ವಿಜಯಪುರ: ಕಳೆದರೆಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ದಂಪತಿ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಜೆವೂರ ಗ್ರಾಮದಲ್ಲಿ ನಡೆದಿದೆ.

ಕರಬಸಪ್ಪ ಆಕಳವಾಡಿ(75) ಹಾಗೂ ಅವರ ಪತ್ನಿ ಇಂದಿರಾಬಾಯಿ ಆಕಳವವಾಡಿ(65) ಮೃತ ದುರ್ದೈವಿಗಳು. ಜೆವೂರ ಗ್ರಾಮದ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ ರಾತ್ರಿ ಮಲಗಿದ್ದ ವೇಳೆ ಮಳೆಯಿಂದ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ಈ ಅವಘಡ ಸಂಭವಿಸಿದೆ.

ಝಳಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *