ಸಿಎಂ ಬರ್ತಾರೆಂದು 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಿದ ಬಳ್ಳಾರಿ ಶಿಕ್ಷಣ ಇಲಾಖೆ!

ಬಳ್ಳಾರಿ: ಸಿಎಂ ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಇವತ್ತು ರಜೆ ಘೋಷಣೆ ಮಾಡಿದೆ.

ಇಂದು ಬಳ್ಳಾರಿ ಜಿಲ್ಲೆಯ ಅಭಿವೃದ್ಧಿ ಹಾಗೂ ಸಾಮಾಜಿಕ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶಕ್ಕಾಗಿ ಸಿಎಂ ಬರ್ತಿರೋದ್ರಿಂದ ಬಳ್ಳಾರಿ ನಗರ ವ್ಯಾಪ್ತಿಯ 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಸಾರಿಗೆ ಹಾಗು ಸುರಕ್ಷತೆ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಶನಿವಾರದಂದು ಸಂಜೆವರೆಗೆ ಶಾಲೆ ಕಾರ್ಯ ನಿರ್ವಹಿಸಲಿದೆ ಎಂದು ಡಿಡಿಪಿಐ ಶ್ರೀಧರ್ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *