ನಾಯಿಗೆ ಡಿಕ್ಕಿ ಆಗೋದನ್ನು ತಪ್ಪಿಸಲು ಹೋಗಿ ಟಂಟಂ ಪಲ್ಟಿ- ಇಬ್ಬರ ಸ್ಥಿತಿ ಗಂಭೀರ

ರಾಯಚೂರು: ನಾಯಿಗೆ ಡಿಕ್ಕಿ ಆಗೋದನ್ನು ತಪ್ಪಿಸಲು ಹೋಗಿ ಟಂಟಂ ವೊಂದು ಪಲ್ಟಿಯಾಗಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಗರಾಳ ಕ್ರಾಸ್ ಹತ್ತಿರ ನಡೆದಿದೆ.

ಗಾಯಾಳುಗಳಾದ ಹನುಮಂತ, ಲಕ್ಷ್ಮವ್ವ ಸ್ಥಿತಿ ಗಂಭೀರವಾಗಿದ್ದು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮೂವರು ಗಾಯಾಳುಗಳಿಗೆ ಮುದಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಶಿಹಾಳ ತಾಂಡದಿಂದ ಮುದಗಲ್ ಗೆ ಬರುತ್ತಿದ್ದ ಟಂಟಂಗೆ ನಾಯಿ ಅಡ್ಡ ಬಂದಿದೆ. ಹೀಗಾಗಿ ನಾಯಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಈ ವೇಳೆ ನಿಯಯಂತ್ರಣ ಕಳೆದುಕೊಂಡ ಟಂಟಂ ಪಲ್ಟಿ ಹೊಡೆದಿದೆ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *