ಸಿಎಂ ಸಿದ್ದರಾಮಯ್ಯರನ್ನ ಕಾಂಗ್ರೆಸ್‍ಗೆ ಕರೆ ತಂದಿದ್ದು ನಾನಲ್ಲ: ಎಚ್.ಎಂ ರೇವಣ್ಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನ ಕಾಂಗ್ರೆಸ್‍ಗೆ ಕರೆ ತಂದಿದ್ದು ನಾನಲ್ಲ ಎಂದು ಸಾರಿಗೆ ಸಚಿವ ಎಚ್.ಎಂ ರೇವಣ್ಣ ಹೇಳಿದ್ದಾರೆ.

ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ನವರು ಕಾಂಗ್ರೆಸ್ ಪಕ್ಷಕ್ಕೆ ಬರುವ ಅಭಿಲಾಷೆ ಅವರಿಗೆ ಇತ್ತು. ಅನೇಕ ಮುಖಂಡರು ಕರೆತರುವಲ್ಲಿ ಇದ್ದರು ಅದರಲ್ಲಿ ನಾನು ಒಬ್ಬ ಅಷ್ಟೇ. ನಾನು ಕುರುಬ ಜನಾಂಗಕ್ಕೆ ಸೀಮಿತನಾಗಿಲ್ಲ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುವೆ ಎಂದು ಹೇಳಿದರು.

ಫೋನ್ ಕದ್ದಾಲಿಕೆ ವಿಚಾರದಲ್ಲಿ ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುವ ವಿಚಾರವಲ್ಲ. ಕೇಂದ್ರ ಸರ್ಕಾರಕ್ಕೆ ಯಾರ ಬಗ್ಗೆ ಮಾಹಿತಿ ಬೇಕಾಗುತ್ತದೆ ಅವರ ವಿಚಾರಣೆ ಇರಬಹುದು. ಇದು ಗೃಹ ಇಲಾಖೆಗೆ ಸಂಬಂಧಿಸಿದ ವಿಚಾರ ನನಗೂ ಅದಕ್ಕೆ ಸಂಬಂಧಿಸಿದ ವಿಚಾರ ಅಲ್ಲ ಎಂದರು.

Comments

Leave a Reply

Your email address will not be published. Required fields are marked *