ಆಂಧ್ರ ಬಸ್ ಡಿಕ್ಕಿಯಾಗಿ ಮಗುಚಿ ಬಿದ್ದ ಓಮ್ನಿ: ಓರ್ವನ ಕಾಲು ಮುರಿತ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಬಸ್ ಮತ್ತು ಒಮ್ನಿ ನಡುವೆ ಅಪಘಾತ ಸಂಭವಿಸಿದೆ.

ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮಾರ್ಕೆಟ್ ಕಡೆಯಿಂದ ರಾಮಮೂರ್ತಿನಗರಕ್ಕೆ ಹೊಗುತ್ತಿದ್ದ ಓಮ್ನಿ ಕಾರಿಗೆ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮಗುಚಿಬಿದ್ದಿದೆ. ಕಾರನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಗೋಪಾಲ್ ಎನ್ನುವವರ ಕಾಲು ಮುರಿದಿದೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಗಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ.

ಸದ್ಯ ಗಾಯಾಳು ಗೋಪಾಲ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Comments

Leave a Reply

Your email address will not be published. Required fields are marked *