ಹಾಸನ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಭಾಪತಿಗೆ ದೂರು

ಹಾಸನ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿಯವರು ಸಭಾಪತಿ ಶಂಕರಮೂರ್ತಿ ಅವರಿಗೆ ದೂರು ನೀಡಿದ್ದಾರೆ.

ಹಾಸನಾಂಬ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ರೋಹಿಣಿ ಸಿಂಧೂರಿ ಅವರು ನನ್ನನ್ನು ಆಹ್ವಾನಿಸದೆ, ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಗೋಪಾಲಸ್ವಾಮಿಯವರು ದೂರಿನಲ್ಲಿ ಆರೋಪಿಸಿದ್ದಾರೆ.

ಸೆಪ್ಟೆಂಬರ್ 27 ಡಿಸಿ ಕಚೇರಿಯಲ್ಲಿ ಹಾಸನಾಂಬ ಜಾತ್ರೆ ಪೂರ್ವಭಾವಿ ಸಭೆಗೆ ಇತರೆ ಜನಪ್ರತಿನಿಧಿಗಳನ್ನು ಆಹ್ವಾನಿಸಿದ್ದಾರೆ. ಆದರೆ ನನ್ನನ್ನು ಉದ್ದೇಶಪೂರ್ವಕವಾಗಿ ಆಹ್ವಾನ ನೀಡದೇ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಹೀಗಾಗಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಶಿಸ್ತುಕ್ರಮವನ್ನು ಕೈಗೊಳ್ಳಬೇಕೆಂದು ಸಭಾಪತಿ ಅವರಲ್ಲಿ ಮನವಿ ಮಾಡಿಕೊಂಡು ಲಿಖಿತ ದೂರು ನೀಡಿದ್ದಾರೆ.

 

Comments

Leave a Reply

Your email address will not be published. Required fields are marked *