ನಾನು ಸತ್ರೆ ಅನಾಥರಾಗ್ತಾರೆ ಅನ್ನೋ ನೋವಿನಿಂದ ಮಕ್ಕಳನ್ನು ಹತ್ಯೆ ಮಾಡಿದ!

ಬೆಳಗಾವಿ: ನಾನು ಸತ್ತರೆ ಮಕ್ಕಳು ಅನಾಥರಾಗುತ್ತಾರೆ ಎಂಬ ನೋವಿನಿಂದ ಮಕ್ಕಳ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿ ತಂದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

6 ವರ್ಷದ ಪ್ರೀಯಾಂಕ ಹಾಗೂ 8 ವರ್ಷದ ಪವಿತ್ರ ತಂದೆಯಿಂದಲೇ ಕೊಲೆಯಾದ ಮೃತ ದುರ್ದೈವಿಗಳು. ಆರೋಪಿ ತಂದೆ ಸಿದ್ದಪ್ಪ ಕುಳ್ಳೂರು ಮಕ್ಕಳನ್ನು ಕೊಲೆ ಮಾಡಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಆದರೆ ವಿಷಯ ತಿಳಿದ ಸ್ಥಳೀಯರು ಸ್ಥಳಕ್ಕೆ ಭೇಟಿ ನೀಡಿ ಸಿದ್ದಪ್ಪನನ್ನು ಬಾಗಲಕೋಟೆ ಆಸ್ಪತ್ರೆಗೆ  ದಾಖಲಿಸಿದ್ದು, ಸ್ಥಿತಿ ಗಂಭೀರವಾಗಿದೆ.

ಸಿದ್ದಪ್ಪನಿಗೆ ಕಳೆದ ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆ ಇತ್ತು ಎನ್ನಲಾಗಿದೆ. ಆತನ ಪತ್ನಿಯು ತವರು ಮನೆಗೆ ಹೋಗಿ ವಾಪಸ್ ಬಂದಿರಲಿಲ್ಲ. ಸಾವಿನ ನಂತರ ಮಕ್ಕಳು ಅನಾಥರಾಗುತ್ತಾರೆ ಎಂದು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇನ್ನೂ ಈ ಬಗ್ಗೆ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Comments

Leave a Reply

Your email address will not be published. Required fields are marked *