ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ- ಐವರ ಬಂಧನ

ಮಂಗಳೂರು: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮಂಗಳೂರಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳು. ಆರೋಪಿಗಳು ಹಳೇ ದ್ವೇಷದಿಂದ ಕೊಲೆ ಕೃತ್ಯ ನಡೆಸಿದ್ದರು ಎಂದು ತಿಳಿದು ಬಂದಿದೆ. ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗೆ ಶೋಧ ನಡೆಯುತ್ತಿದೆ.

ಮಂಗಳೂರಲ್ಲಿ ರೌಡಿಸಂ ಹೆಚ್ಚಿದ್ದು ಮಟ್ಟ ಹಾಕಲು ಎರಡು ತಂಡ ರಚಿಸಿದ್ದೇವೆ. ಸಿಸಿಬಿ ಸೇರಿದಂತೆ ಮತ್ತೊಂದು ತಂಡಕ್ಕೂ ಹೊಣೆ ನೀಡಲಾಗಿದೆ ಎಂದು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಹೇಳಿದ್ದಾರೆ.

ಇದನ್ನೂ ಓದಿ: ಸಚಿವ ಖಾದರ್ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ

ಅಕ್ಟೋಬರ್ 4ರ ಸಂಜೆ ಉಳ್ಳಾಲದ ಮುಕ್ಕಚ್ಚೇರಿ ಮಸೀದಿ ಬಳಿ ಜುಬೇರ್ ಮತ್ತು ಇಲಿಯಾಸ್ ಎಂಬ ಇಬ್ಬರು ನಿಂತಿದ್ದಾಗ ನಾಲ್ವರ ತಂಡ ಮಚ್ಚು ಲಾಂಗ್ ಗಳಿಂದ ದಾಳಿ ನಡೆಸಿತ್ತು. ತೀವ್ರವಾಗಿ ಗಾಯಗೊಂಡ ಜುಬೇರ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

https://www.youtube.com/watch?v=BNS87HmXv7o

 

Comments

Leave a Reply

Your email address will not be published. Required fields are marked *