ವರ್ಗಾವಣೆಗೆ ಅಧಿಕಾರಿಗಳು ಹೆದರಬಾರದು: ಡಿಐಜಿ ರೂಪಾ

ದಾವಣಗೆರೆ: ಅಧಿಕಾರಿಗಳು ವರ್ಗಾವಣೆಗೆ ಹೆದರಬಾರದು. ವರ್ಗಾವಣೆಗೆ ಏನಾದ್ರು ಹೆದರಿದ್ರೆ ಇನ್ನೊಬ್ಬರ ಅಡಿಯಾಳಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಸಂಚಾರಿ ವಿಭಾಗದ ಡಿಐಜಿ ಡಿ ರೂಪಾ ಹೇಳಿದ್ದಾರೆ.

ನಗರದ ಕುವೆಂಪು ಕನ್ನಡ ಭವನದಲ್ಲಿ ಅಯೋಜನೆ ಮಾಡಲಾಗಿದ್ದ ಜಿಲ್ಲಾ ಮಟ್ಟದ ಮಹಿಳಾ ಸಾಹಿತ್ಯ ಸಮೇವೇಶವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ವರ್ಗಾವಣೆಗೆ ಹೆದರದೇ ಇದ್ದರೆ ಯಾರ ಮುಲಾಜಿಲ್ಲದೆ ಕೆಲಸ ಮಾಡಬಹುದು ಅಂತ ಹೇಳಿದ್ರು.

ನನ್ನನ್ನು ಡಿಐಜಿ ವಿಭಾಗದಿಂದ ಸಂಚಾರಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ರಿಂದ ನನಗೆ ಯಾವುದೇ ಬೇಸರವಿಲ್ಲ. ಅಲ್ಲದೇ ಸರ್ಕಾರಕ್ಕೆ ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಹಾರದ ಬಗ್ಗೆ ವರದಿ ನೀಡಿದ್ದೇನೆ. ಇದರ ಬಗ್ಗೆ ತನಿಖೆ ಕೂಡಾ ನಡೆಯುತ್ತಿದೆ. ಈ ಪ್ರಕರಣದಲ್ಲಿ ನನ್ನ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ. ನಾನು ಒಬ್ಬ ಅಧಿಕಾರಿಯಾಗಿ ಮಾಡಬೇಕಾದ ಕೆಲ್ಸಾ ಮಾಡಿದ್ದೇನೆ ಅಷ್ಟೇ ಎಂದು ತಿಳಿಸಿದ್ರು.

Comments

Leave a Reply

Your email address will not be published. Required fields are marked *