ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಬೆಂಗಳೂರು: ದಿನದಿಂದ ದಿನಕ್ಕೆ ವರದಕ್ಷಿಣೆ ಕಿರುಕುಳಕ್ಕೆ ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ. ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೊಂದ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರಾಮಮೂರ್ತಿ ನಗರ ಓಲ್ಡ್ ಪೆÇಲೀಸ್ ಸ್ಟೇಷನ್ ಸಮೀಪದಲ್ಲಿ ನಡೆದಿದೆ.

ಅನಿತಾ (23) ನೇಣಿಗೆ ಶರಣಾದ ಗೃಹಿಣಿ. ಇವರಿಗೆ 7 ವರ್ಷಗಳ ಹಿಂದೆ ತರಕಾರಿ ವ್ಯಾಪಾರಿಯಾದ ಶಿವಕುಮಾರ್ ಎಂಬವರ ಜೊತೆ ವಿವಾಹವಾಗಿದ್ದು, ಎರಡು ವರ್ಷದ ಹೆಣ್ಣು ಮಗು ಕೂಡ ಇದೆ. ಶಿವಕುಮಾರ್ ತನ್ನ ಪತ್ನಿಗೆ ತವರು ಮನೆಯಿಂದ ಹಣ ತರುವಂತೆ ದಿನವೂ ಪೀಡಿಸುತ್ತಿದ್ದ. ಮತ್ತೆ ರಾತ್ರಿ ಹಣ ತರುವಂತೆ ಜಗಳವಾಡಿದ್ದಾನೆ. ಇದರಿಂದ ನೊಂದ ಅನಿತಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ .

ಘಟನೆ ನಡೆದ ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಶಿವಕುಮಾರ್‍ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅನಿತಾರನ್ನು ಗಂಡ ಮತ್ತು ಮಾವ ಸೇರಿ ಕೊಲೆ ಮಾಡಿದ್ದಾರೆ ಎಂದು ಅನಿತಾ ಪೋಷಕರ ಆರೋಪ ಮಾಡುತ್ತಿದ್ದಾರೆ.

ಸದ್ಯಕ್ಕೆ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

Comments

Leave a Reply

Your email address will not be published. Required fields are marked *