ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು- ಒದ್ದಾಡುತ್ತಿದ್ರೂ ವಾರ್ಡ್‍ಗೆ ವೈದ್ಯರು ಬರ್ಲಿಲ್ಲವೆಂದು ಕುಟುಂಬಸ್ಥರ ಆಕ್ರೋಶ

ಧಾರವಾಡ: ವೈದ್ಯರ ನಿರ್ಲಕ್ಷದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಜೋಡಳ್ಳಿ ಗ್ರಾಮದ ನಿವಾಸಿಯಾಗಿದ್ದ ಸೋಮಶೇಖರ ಹಡಪದ (42) ಮೃತ ದುರ್ದೈವಿ. ಮೂರು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗಿನ ಜಾವ 6 ಗಂಟೆ ಸುಮಾರಿಗೆ ತೀವ್ರ ಅನಾರೋಗ್ಯಕ್ಕೆ ಒಳಗಾದ ಸೋಮಶೇಖರ ಅವರು ಒದ್ದಾಡಿ ಸಾವನ್ನಪ್ಪಿದ್ದಾರೆ. ಈ ಸಮಯದಲ್ಲಿ ರೋಗಿಯ ಸ್ಥಿತಿಯ ಕುರಿತು ವೈದ್ಯರಿಗೆ ಮಾಹಿತಿ ನೀಡಿದರೂ ವೈದ್ಯರು ವಾರ್ಡ್‍ಗೆ ಬಂದು ಚಿಕಿತ್ಸೆ ನೀಡಿಲ್ಲ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಸ್ಪತ್ರೆ ವೈದ್ಯರಾದ ನಾಡಗೌಡ, ಮೃತ ವ್ಯಕ್ತಿ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಮದ್ಯಪಾನ ಮಾಡದಂತೆ ಸೂಚಿಸಿದ್ದೆವು. ಆದರೆ ಅವರು ನಿರಂತರ ಮದ್ಯಪಾನ ಮಾಡುತ್ತಿದ್ದರಿಂದಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಆಸ್ಪತ್ರೆಯ ಇತರೆ ರೋಗಿಗಳು ವೈದ್ಯರ ನಿರ್ಲಕ್ಷದಿಂದಲೇ ಸಾವು ಸಂಭವಿಸಿದೆ ಎಂದಿದ್ದು, ರಾತ್ರಿ ಪಾಳಿಯಲ್ಲಿದ್ದ ಸಿಬ್ಬಂದಿ ಯಾವುದೇ ಚಿಕಿತ್ಸೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *