ಮುಂದಿನ ಚುನಾವಣೆಯಲ್ಲಿ ರೇವಣ್ಣ ಪುತ್ರ ಪ್ರಜ್ವಲ್ ಸ್ಪರ್ಧೆ ಖಚಿತ

ಹಾಸನ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ಖಚಿತ ಅಂತ ಭವಾನಿ ರೇವಣ್ಣ ಹೇಳಿದ್ದಾರೆ.

ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪುತ್ರ ಪ್ರಜ್ವಲ್ ಸ್ಪರ್ಧೆ ಖಚಿತವಾಗಿದ್ದು, ಇದಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂದ್ರು.

ಇದನ್ನೂ ಓದಿ: ವಿಧಾನಸಭಾ ಚುನಾವಣೆಗೆ ಪ್ರಜ್ವಲ್ ರೇವಣ್ಣಗೆ ಟಿಕೆಟ್?: ರೇವಣ್ಣ, ದೇವೇಗೌಡ ಹೀಗಂದ್ರು

ಆದ್ರೆ ಆತ ಸ್ಪರ್ಧಿಸುವ ಕ್ಷೇತ್ರ ಯಾವುದು ಎಂಬುದನ್ನು ಗೌಡರೇ ನಿರ್ಧಾರ ಮಾಡಲಿದ್ದಾರೆ. ಹಾಸನ ಜಿಲ್ಲೆ ಬೇಲೂರು ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ಎರಡೂ ಕಡೆ ವಾತಾವರಣ ಚೆನ್ನಾಗಿದೆ ಅಂದ್ರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಚುನಾವಣೆಗೆ ನಿಲ್ತಾರಾ: ಎಚ್‍ಡಿ ರೇವಣ್ಣ ಹೇಳಿದ್ದು ಹೀಗೆ

ಈ ಹಿಂದೆ ನಮ್ಮ ಕುಟುಂಬದಿಂದ ರೇವಣ್ಣ ಹಾಗೂ ಕುಮಾರಸ್ವಾಮಿ ಇಬ್ಬರೇ ಸ್ಪರ್ಧೆ ಮಾಡಲಿದ್ದಾರೆ ಎಂದು ಗೌಡರು ಹೇಳಿದ್ದರು. ಲೋಕಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳಿವೆ. ಪ್ರಸ್ತುತ ನಮ್ಮ ಲೋಕಸಭೆಯ ಅಭ್ಯರ್ಥಿ ದೇವೇಗೌಡ ಅವರೇ ಇದ್ದಾರೆ. ಅವರು ಇರುವವರೆಗೂ ಈ ಪ್ರಶ್ನೆ ಉದ್ಭವವಾಗೊಲ್ಲ ಅಂತ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಕೂಡ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ದೇವೇಗೌಡರ ಇಷ್ಟಕ್ಕೆ ವಿರುದ್ಧವಾಗಿ ನಡೆಯಲ್ಲ: ಭವಾನಿ ರೇವಣ್ಣ

Comments

Leave a Reply

Your email address will not be published. Required fields are marked *