ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ರಾಜಸ್ಥಾನ ಸಿಎಂ ವಸುಂಧರಾ ರಾಜೆ ಭೇಟಿ- ಮೂರೂವೆರೆ ಗಂಟೆ ಭಕ್ತರಿಗಿಲ್ಲ ಪ್ರವೇಶ

ಉಡುಪಿ: ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ಇಂದು ಬೆಳಗ್ಗೆ ಭೇಟಿಕೊಡುವ ಆಲೋಚನೆ ನಿಮ್ಮದಾಗಿದ್ದರೆ ಪ್ಲ್ಯಾನ್ ನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳೋದು ಒಳ್ಳೆಯದು. ಯಾಕಂದ್ರೆ ಕೊಲ್ಲೂರಿಗೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಬರುತ್ತಿದ್ದಾರೆ. ರಾಜಸ್ಥಾನ ಸಿಎಂ ಆಗಮನ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮೂರೂವರೆ ಗಂಟೆ ದೇವಸ್ಥಾನ ಪ್ರವೇಶ ನಿರ್ಬಂಧಿಸಲಾಗಿದೆ.

ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಭಕ್ತರಿಗೆ ದೇವಸ್ಥಾನದ ಪ್ರವೇಶ ನಿರ್ಬಂಧಿಸಿದೆ. ಕುಂದಾಪುರದ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಸಿಎಂ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ ಅರೆ ಶೀರೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸ್ತಾರೆ. ಅಲ್ಲಿಂದ ರಸ್ತೆ ಮೂಲಕ ದೇವಸ್ಥಾನಕ್ಕೆ ತೆರಳಲಿದ್ದಾರೆ. ನಂತ್ರ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಸುಂಧರಾ ರಾಜೆ, ದೇವಿಗೆ ವಿಶೇಷ ಸೇವೆ, ಹೋಮ ಮಾಡಿಸಲಿದ್ದಾರೆ ಎನ್ನಲಾಗಿದೆ.

ರಾಜಸ್ಥಾನ ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸಾರ್ವಜನಿಕರಿಗೆ ದೇವಸ್ಥಾನದ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ಮತ್ತು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

Comments

Leave a Reply

Your email address will not be published. Required fields are marked *