ದಲಿತ ಕುಟುಂಬಗಳಿಗೆ ಅನ್ನಭಾಗ್ಯ ಅಕ್ಕಿ ರದ್ದು- ಸೊಪ್ಪು ತಿಂದು ಕೊರೆಯುವ ಚಳಿಯಲ್ಲೂ ಪ್ರತಿಭಟನೆ

ಚಿಕ್ಕಬಳ್ಳಾಪುರ: ಅನ್ನಭಾಗ್ಯದ ಅಕ್ಕಿಗಾಗಿ ದಲಿತ ಸಮುದಾಯದ ಜನ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಗ್ರಾಮ ತೊರೆದು ಬಂದು ಸೊಪ್ಪು ಸೆದೆ ತಿನ್ನುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚೌಡದೇನಹಳ್ಳಿಯ ದಲಿತರು ವಿನೂತನವಾಗಿ ಪ್ರತಿಭಟಿಸಿದ್ದಾರೆ.


ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಅಂತ ದಲಿತರಿಗೆ ಸಿಗಬೇಕಾದ ಪಡಿತರ ಚೀಟಿ ರದ್ದು ಪಡಿಸಲಾಗಿತ್ತು. ಹೀಗಾಗಿ ಅಲ್ಲಿನ ಗ್ರಾಮದ ಜನ ಕಳೆದ ಒಂದು ವರ್ಷದಿಂದ ಪಡಿತರ ಸಿಗದೆ ಪರದಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಇದೀಗ ಗ್ರಾಮ ತೊರೆದು ಗ್ರಾಮದ ಹೊರವಲಯದಲ್ಲೇ ವಾಸ್ತವ್ಯ ಹೂಡಿ ಪ್ರತಿಭಟನೆ ಮಾಡಿದ್ದಾರೆ. ತಮಗೆ ಸಿಗಬೇಕಾದ ಸೌಲಭ್ಯಗಳು ಒದಗಿಸುವಂತೆ ಆಗ್ರಹಿಸಿ ಕಳೆದ ರಾತ್ರಿಯಿಡೀ ಕೊರೆಯುವ ಚಳಿಯನ್ನು ಲೆಕ್ಕಿಸದೇ ದಲಿತ ಕುಟುಂಬಗಳು ಪ್ರತಿಭಟನೆ ನಡೆಸಿವೆ.

Comments

Leave a Reply

Your email address will not be published. Required fields are marked *