ಮದ್ವೆಯಾದ ಒಂದೇ ತಿಂಗ್ಳಿಗೆ ಡೆತ್‍ನೋಟ್ ಬರೆದು ಮಹಿಳೆ ಆತ್ಮಹತ್ಯೆ

ರಾಮನಗರ: ನವ ವಿವಾಹಿತ ಮಹಿಳೆಯೊಬ್ಬರು ಡೆತ್ ನೋಟ್ ಬರೆದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಶೆಟ್ಟಿ ಹಳ್ಳಿ ಬಳಿ ಘಟನೆ ನಡೆದಿದೆ.

ಕಾಂತಲಕ್ಷ್ಮಿ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೂಲತಃ ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾಗಿದ್ದ ಕಾಂತಲಕ್ಷ್ಮಿ ಮದುವೆಗೂ ಮುನ್ನ ಪ್ರದೀಪ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದರೆ ಪ್ರೀತಿಗೆ ಮನೆಯವರು ಒಪ್ಪದ ಕಾರಣ ಬೇರೊಬ್ಬನ ಜೊತೆ ವಿವಾಹ ನಡೆದಿತ್ತು. ಇದರಿಂದ ಮನನೊಂದಿದ್ದ ಕಾಂತಲಕ್ಷ್ಮಿ ಇಂದು ಬೆಳಗ್ಗೆ ಚನ್ನಪಟ್ಟಣಕ್ಕೆ ಬಂದು ಶೆಟ್ಟಿಹಳ್ಳಿ ಗ್ರಾಮದ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾನು ಮದುವೆಗೂ ಮುನ್ನ ಪ್ರದೀಪ್ ಎಂಬಾತನನ್ನು ಪ್ರೀತಿಸುತ್ತಿದ್ದೆ. ಆದರೆ ನಮ್ಮ ಪ್ರೀತಿಗೆ ಮನೆಯವರು ಒಪ್ಪಲಿಲ್ಲ. ಬದಲಿಗೆ ಬೇರೆ ಹುಡುಗನ ಜೊತೆ ಮದುವೆ ಮಾಡಿಸಿದರು. ಆದರೆ ಅವನ ಜೊತೆ ಬಾಳಲು ನನಗೆ ಇಷ್ಟವಿಲ್ಲ. ಆದ್ದರಿಂದ ನಾನು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ ಎಂದು ಕಾಂತಲಕ್ಷ್ಮಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಸಂಬಂಧ ಚನ್ನಪಟ್ಟಣ ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *