ನನ್ನ ಕ್ಷೇತ್ರದಲ್ಲಿ ಸಿಎಂ ಮಗ ಬಂದು ಕಾಮಗಾರಿಗೆ ಚಾಲನೆ ನೀಡ್ತಾರೆ- ಜಿಟಿಡಿ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಪುತ್ರ ಡಾ ಯತೀಂದ್ರ ವಿರುದ್ಧ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನನ್ನ ಕ್ಷೇತ್ರದಲ್ಲಿ ಕಾರ್ಯಕ್ರಮಗಳಿಗೆ ಭಾಗವಹಿಸಲು ಅವಕಾಶ ನೀಡ್ತಿಲ್ಲ. ಮುಖ್ಯಮಂತ್ರಿಗಳ ಮಗ ಬಂದು ಕಾಮಗಾರಿಗೆ ಚಾಲನೆ ನೀಡ್ತಾರೆ. ಮುಖ್ಯಮಂತ್ರಿ ಇಲ್ಲೇ ಸ್ಪರ್ಧೆ ಮಾಡ್ತಾರೆ ಅನ್ನೋ ಕಾರಣಕ್ಕೆ ಸಿದ್ದರಾಮಯ್ಯ ಅವರ ಆಪ್ತ ಮರೀಗೌಡ ಧಮ್ಕಿ ಹಾಕ್ತಾರೆ. ಪೊಲೀಸರನ್ನು ಬಿಟ್ಟು ಕೇಸ್ ಹಾಕ್ತಾರೆ ಅಂತ ವಿಧಾನಸಭೆಯಲ್ಲಿ ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದ್ರು.

ಇತ್ತ ನನ್ನ ಮಗ ಕಾರ್ಯಕ್ರಮಕ್ಕೆ ಹೋಗಿದ್ದಾನೋ ಇಲ್ವೋ ಅಂತ ನನಗೆ ಗೊತ್ತಿಲ್ಲ ಅಂತ ಸಿಎಂ ಹೇಳಿದ್ರೂ ನಂತರ ಹೋಗಿದ್ದಾನೆ ಅಂದ್ರು. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಜಿಟಿಡಿ ಹಕ್ಕುಚ್ಯುತಿ ಮಂಡನೆಗೆ ಮುಂದಾದ್ರು. ಆಗ ಸದನದಲ್ಲಿ ಆಡಳಿತ-ವಿಪಕ್ಷ ಸದಸ್ಯರ ನಡುವೆ ಗಲಾಟೆ ನಡೆಯಿತು.

Comments

Leave a Reply

Your email address will not be published. Required fields are marked *