ತಂದೆ ಮೇಲಿನ ಇರಿತ ಸುದ್ದಿ ಕೇಳಿದ್ರೂ ಹಾರ್ಟ್ ಆಪರೇಷನ್ ಪೂರ್ಣಗೊಳಿಸಿದ ಮಗ ರವಿಶಂಕರ್

ಬೆಂಗಳೂರು: ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಅವರ ಪುತ್ರ ರಾಮಯ್ಯ ಆಸ್ಪತ್ರೆಯಲ್ಲಿರುವ ಡಾ. ರವಿಶಂಕರ್ ಶೆಟ್ಟಿ ತಂದೆಯನ್ನು ನೋಡಲು ತೆರಳುವ ಮೊದಲು ವೃತ್ತಿ ಗೌರವ ತೋರಿಸಿದ್ದಾರೆ.

ತಂದೆ ವಿಶ್ವನಾಥ್ ಶೆಟ್ಟಿ ಅವರಿಗೆ ಲೋಕಾಯುಕ್ತ ಕಚೇರಿಯಲ್ಲಿ ಚಾಕು ಇರಿದ ಸುದ್ದಿ ತಿಳಿಯುವ ವೇಳೆ ಆಸ್ಪತ್ರೆಯಲ್ಲಿ ಹಾರ್ಟ್ ಆಪರೇಷನ್ ಮಾಡುತ್ತಿದ್ದರು. ಸಹೋದ್ಯೋಗಿಗಳಿಂದ ಸುದ್ದಿ ತಿಳಿದರೂ ಧೃತಿಗೆಡದೆ ಸರ್ಜನ್ ಆಗಿರುವ ರವಿಶಂಕರ್ ಶೆಟ್ಟಿ ರೋಗಿಯ ಆಪರೇಶನ್ ಪೂರ್ಣಗೊಳಿಸಿದ್ದಾರೆ. ಇದನ್ನೂ ಓದಿ : ರಾಜ್ಯದಲ್ಲಿ ಗುಂಡಾ ಸರ್ಕಾರ ಆಳ್ವಿಕೆಯಲ್ಲಿದ್ದು, ರಾಷ್ಟ್ರಪತಿ ಆಡಳಿತ ತನ್ನಿ: ಆರ್ ಅಶೋಕ್

ಆಪರೇಷನ್ ಪೂರ್ಣಗೊಳಿಸಿದ ನಂತರ ಮಲ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಂದೆ ವಿಶ್ವನಾಥ್ ಶೆಟ್ಟಿ ಅವರನ್ನು ನೋಡಲು ಆಗಮಿಸಿದ್ದಾರೆ. ಇದನ್ನೂ ಓದಿ : ಇದು ವಿಪರ್ಯಾಸವೇ ಸರಿ: ಸಂತೋಷ್ ಹೆಗ್ಡೆ

Comments

Leave a Reply

Your email address will not be published. Required fields are marked *