ಕಥುವಾ ರೇಪ್ ಪ್ರಕರಣ- ಬಾಲಕಿಯನ್ನು ಕೊಂದಿದ್ದು ಒಳ್ಳೆದಾಯಿತೆಂದ ಬ್ಯಾಂಕ್ ಮ್ಯಾನೇಜರ್ ಅಮಾನತು

ಕೊಚ್ಚಿ: ದೇಶದೆಲ್ಲೆಡೆ ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ವೇಳೆ ಬಾಲಕಿಯನ್ನು ಕೊಂದಿದ್ದು ಒಳ್ಳೆದಾಯಿತೆಂದು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದ ಕೇರಳ ಖಾಸಗಿ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಅಮಾನತು ಮಾಡಲಾಗಿದೆ.

ಕೇರಳದ ಕೊಚ್ಚಿಯ ಕೋಟಕ್ ಮಹೀಂದ್ರ ಬ್ಯಾಂಕ್ ಶಾಖೆಯ ಮ್ಯಾನೇಜರ್ ಆಗಿರುವ ವಿಷ್ಣು ನಂದಕುಮಾರ್ ಕೆಲಸ ಕಳೆದುಕೊಂಡ ವ್ಯಕ್ತಿ. ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಈತ ನೀಡಿರುವ ಪ್ರತಿಕ್ರಿಯೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಜಮ್ಮು ಕಾಶ್ಮೀರದ ಕಥುವಾದಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರರಕಣದ ಸಂಬಂಧ ವಿಷ್ಣು ತನ್ನ ಫೇಸ್ ಬುಕ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದ. ಚಿಕ್ಕ ವಯಸ್ಸಿನಲ್ಲೇ ಆಕೆಯನ್ನು ಕೊಲೆ ಮಾಡಿರುವುದು ಒಳ್ಳೆದಾಯಿತು, ಇಲ್ಲವಾದರೆ ಆಕೆ ದೊಡ್ಡವಳಾದ ಮೇಲೆ ಭಾರತದ ಮೇಲೆ ಬಾಂಬ್ ಎಸೆಯುತ್ತಿದ್ದಳು ಎಂದು ತನ್ನ ಕಾಮೆಂಟ್ ನಲ್ಲಿ ಬರೆದುಕೊಂಡಿದ್ದ. ಈತ ಎಂದು ಈ ಕಾಮೆಂಟ್ ಮಾಡಿದ್ದ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಆದರೆ ಆತನ ಕಾಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ತನ್ನ ಫೇಸ್ ಬುಕ್ ಖಾತೆಯನ್ನು ಡಿಲೀಟ್ ಮಾಡಿದ್ದಾನೆ ಎಂದು ವರದಿಯಾಗಿದೆ.

ಬಾಲಕಿಯ ಕುರಿತು ವಿಷ್ಣು ಮಾಡಿದ್ದ ಕಾಮೆಂಟ್ ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು, ಅಲ್ಲದೇ ಆತನನ್ನು ಕರ್ತವ್ಯದಿಂದ ವಜಾಗೊಳಿಸುವಂತೆ ಆಕ್ರೋಶ ವ್ಯಕ್ತವಾಗಿತ್ತು. ಟ್ವಿಟ್ಟರ್ ನಲ್ಲೂ ಆತನ ವಿರುದ್ಧ ವ್ಯಾಪಕ ಟೀಕೆ ಮಾಡಿ ಹಲವರು ಪ್ರತಿಕ್ರಿಯೆ ನೀಡಿದ್ದರು. ಅಲ್ಲದೇ #Dismiss_your_manager ಎಂದು ಟ್ರೆಂಡ್ ಮಾಡಿ ಟ್ರೋಲ್ ಮಾಡಿದ್ದರು.

ಘಟನೆ ತೀವ್ರತೆ ಕುರಿತು ಎಚ್ಚೆತ್ತ ಕೋಟಕ್ ಬ್ಯಾಂಕ್ ಆಡಳಿತ ಮಂಡಳಿ ಶುಕ್ರವಾರ ಸಂಜೆ ಈ ಕುರಿತು ಪ್ರತಿಕ್ರಿಯೆ ನೀಡಿದೆ. ಏಪ್ರಿಲ್ 11 ಕ್ಕೆ ಅನ್ವಯ ಆಗುವಂತೆ ವಿಷ್ಣು ನಂದಕುಮಾರ್ ನನ್ನು ಸೇವೆಯಲ್ಲಿ ಕಳಪೆ ಪ್ರದರ್ಶನ ನೀಡಿದ ಕಾರಣ ನೀಡಿ ತೆಗೆದು ಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದೆ. ಅಲ್ಲದೇ ಆತನ ಹೇಳಿಕೆಯನ್ನು ಖಂಡಿಸುತ್ತಿರುವುದಾಗಿ ತಿಳಿಸಿದೆ.

https://www.facebook.com/KotakBank/photos/a.214267861951331.59019.210520628992721/1949907218387378/?type=3&theater

Comments

Leave a Reply

Your email address will not be published. Required fields are marked *