ಸೆಲ್ಫಿ ತೆಗೆಯಲು ಹೋಗಿ ಸಮುದ್ರ ಪಾಲಾಗಿದ್ದ ಯುವಕನ ರಕ್ಷಣೆ

ಕಾರವಾರ: ಸೆಲ್ಫಿ ತೆಗೆದುಕೊಳ್ಳುವುದು ಇಂದಿನ ಯುವ ಜನತೆಯಲ್ಲಿ ಟ್ರೆಂಡ್ ಆಗಿ ಬದಲಾಗಿದೆ. ಎತ್ತರದ ಸ್ಥಳದಿಂದಲೋ ಅಥವಾ ತುದಿ ಅಂಚಿನಿಂದಲೋ ಸೆಲ್ಫಿ ತೆಗೆದುಕೊಳ್ಳುತ್ತಾರೆ. ಈ ವೇಳೆ ಸ್ವಲ್ಪ ಎಚ್ಚರ ತಪ್ಪಿದ್ರೂ ಅಪಾಯ ಕಟ್ಟಿಟ್ಟ ಬುತ್ತಿ. ಸೆಲ್ಫಿ ಅವಘಡಗಳ ಬಗ್ಗೆ ಸಾಕಷ್ಟು ವರದಿಗಳು ಬಿತ್ತರವಾದ್ರೂ ಯುವ ಜನತೆ ಸೆಲ್ಫಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಫೋಟೋ ಮೊರೆ ಹೋಗ್ತಾರೆ. ಸೆಲ್ಫಿ ತೆಗೆಯಲು ಹೋಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಪ್ರವಾಸಿಗನನ್ನು ರಕ್ಷಿಸಿದ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ‘ಓಂ ಬೀಚ್’ನಲ್ಲಿ ನಡೆದಿದೆ.

ರಾಣಿಬೆನ್ನೂರು ಮೂಲದ ಬಸವರಾಜ್ ಎಂ. ಎಂಬವವರೇ ರಕ್ಷಣೆಗೊಳಗಾದ ವ್ಯಕ್ತಿ. 5 ಜನರ ತಂಡ ಪ್ರವಾಸಕ್ಕೆಂದು ಗೋಕರ್ಣದ ಓಂ ಬೀಚ್ ಗೆ ಆಗಮಿಸಿದ್ದರು. ಈ ವೇಳೆ ಸಮುದ್ರದ ಬಳಿ ಇದ್ದ ಬಂಡೆಯ ಮೇಲೆ ಸೆಲ್ಫಿ ತೆಗೆಯಲು ಹೋಗಿ ಕಾಲುಜಾರಿ ಬಸವರಾಜ್ ಸಮುದ್ರಪಾಲಾಗಿದ್ದರು.

ಬಸವರಾಜ್ ಸಮುದ್ರಕ್ಕೆ ಬೀಳುತ್ತಿದ್ದನ್ನು ಸ್ಥಳದಲ್ಲಿದ್ದ ದ ಲೈಫ್ ಗಾರ್ಡ್ ಗಳು ಗಮನಿಸಿದ್ದಾರೆ. ಕೂಡಲೇ ಸಮುದ್ರಕ್ಕೆ ಇಳಿದ ಲೈಫ್ ಗಾರ್ಡ್ ಗಳಾದ ಪಾಂಡುರಂಗ ಹಾಗೂ ಪ್ರವೀಣ್ ಇಬ್ಬರೂ ಬಸವರಾಜ್ ಅವರನ್ನು ರಕ್ಷಣೆ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *