ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸಿದ ಯಡೂರಪ್ಪ

ಮಡಿಕೇರಿ: ಕೃಷಿಕ ಪಿ.ಎಸ್.ಯಡೂರಪ್ಪನವರು ಪಕ್ಷೇತರ ಅಭ್ಯರ್ಥಿಯಾಗಿ ಮಡಿಕೇರಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಪಿರಿಯಾಪಟ್ಟಣ ಮೂಲದ ಕೃಷಿಕರಾಗಿರುವ ಯಡೂರಪ್ಪನವರು ಇಂದು ಚುನಾವಣಾಧಿಕಾರಿ ರಮೇಶ್ ಪಿ. ಕೋನರೆಡ್ಡಿ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಮಡಿಕೇರಿ ಕ್ಷೇತ್ರದಿಂದ ಯಾರ ಒತ್ತಡ ಇಲ್ಲದೇ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿಂದ ಬೇಕಾದರೂ ಸ್ಪರ್ಧೆ ಮಾಡಬಹುದು. ನಾನು ಲಿಂಗಾಯಿತ ಸಮುದಾಯಕ್ಕೆ ಸೇರಿದವನು. ನನ್ನದು ಮನುಷ್ಯ ಧರ್ಮ ಎಂದು ಹೇಳಿದರು.

Comments

Leave a Reply

Your email address will not be published. Required fields are marked *