ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ನಿಜವೋ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ: ಸಿಎಂ

ಬೆಳಗಾವಿ: ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ನಿಜವೋ, ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ ಅಂತಾ ಸಿಎಂ ಸಿದ್ದರಾಮಯ್ಯ ಹುಕ್ಕೇರಿಯಲ್ಲಿ ನಡೆದ ಸಮಾವೇಶದಲ್ಲಿ ಹೇಳಿದ್ದಾರೆ.

ಹುಕ್ಕೇರಿಯ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಎ.ಬಿ.ಪಾಟೀಲ್ ಅವರನ್ನು ಬೆಂಬಲಿಸಬೇಕು. ಹಾಲಿ ಶಾಸಕರಾಗಿರುವ ಉಮೇಶ್ ಕತ್ತಿ ಅವ್ರಿಗೆ ಬಡವರ ಕಾಳಜಿ ಇಲ್ಲ. ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಹಲವು ಕಾರ್ಯಕ್ರಮಗಳನ್ನು ಮಾಡಿದೆ. ಇಂತಹ ಜನಪರ ಕಾರ್ಯಕ್ರಮಗಳು ಮುಂದುವರೆಯ ಬೇಕಾದ್ರೆ, ಕಾಂಗ್ರೆಸ್‍ಗೆ ಬೆಂಬಲ ನೀಡಿ ಅಂತಾ ಜನರಲ್ಲಿ ಸಿಎಂ ಮನವಿ ಮಾಡಿಕೊಂಡರು. ಇದನ್ನೂ ಓದಿ: ಸೂರ್ಯ, ಚಂದ್ರ ಇರುವರೆಗೂ ಗುಂಡ್ಲುಪೇಟೆಯಲ್ಲಿ ಕುಟುಂಬ ರಾಜಕಾರಣ ಇರುತ್ತೆ: ಗೀತಾ ಮಹದೇವ ಪ್ರಸಾದ್

ನಿಪ್ಪಾಣಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ನನಗೆ ಮರಾಠಿ ಭಾಷೆ ಬರಲ್ಲ ಕ್ಷಮಿಸಬೇಕು ಎಂದು ಕೇಳಿದ್ರು. ಯಾವಗಲೂ ನಾನು ಕನ್ನಡಿಗ ಅಂತಾ ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದ ಸಿಎಂ ವೋಟ್ ಗಾಗಿ ಮರಾಠಿಗರಲ್ಲಿ ಕ್ಷಮೆ ಕೇಳಿದ್ದಾರೆ ಅಂತಾ ವಿರೋಧ ಪಕ್ಷದ ನಾಯಕರು ಟೀಕಿಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *