ಎಲೆಕ್ಷನ್ ಹೊತ್ತಲ್ಲಿ ಶಿರಸಿ ಕಾಂಗ್ರೆಸ್ ಅಭ್ಯರ್ಥಿಗೆ ಐಟಿ ಶಾಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅವರ ಆಪ್ತರಿಗೆ ಐ.ಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಆರ್.ವಿ ದೇಶಪಾಂಡೆಯವರ ಆಪ್ತ ಹಾಗೂ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೀಮಣ್ಣ ನಾಯ್ಕರವರ ಶಿರಸಿಯ ಅಯ್ಯಪ್ಪ ನಗರದಲ್ಲಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳವಾರ ರಾತ್ರಿ ದಿಡೀರ್ ದಾಳಿ ನಡೆಸಿದ ಅಧಿಕಾರಿಗಳು ಕಾಗದ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಬೀಮಣ್ಣ ನಾಯ್ಕ್ ರವರು ಕೃಷಿಕರಾಗಿರುವುದಲ್ಲದೇ ಬಾರ್ ಆಂಡ್ ರೆಸ್ಟೋರೆಂಟ್ ಸೇರಿದಂತೆ ಉದ್ಯಮಿಯಾಗಿ ಕೂಡ ಗುರುತಿಸಿಕೊಂಡಿದ್ದರು. ಇನ್ನು ಕಳೆದ ಮೂರು ದಿನಗಳ ಹಿಂದೆ ಕೂಡ ಐಟಿ ಅಧಿಕಾರಿಗಳು ಆರ್.ವಿ.ದೇಶಪಾಂಡೆಯವರ ಆಪ್ತ ಹಳಿಯಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉದ್ಯಮಿ ಸುಭಾಷ್ ಕೂರವೇಕರ್ ಎಂಬವವರ ಮನೆಯ ಮೇಲೆ ಸಹ ಐ.ಟಿ ದಾಳಿ ನಡೆಸಿ ಮಹತ್ವದ ದಾಖಲೆ ಪತ್ರ ವಶಪಡಿಸಿಕೊಂಡಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾಗಿದ್ದ ಹಾಗೂ ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಬೀಮಣ್ಣ ನಾಯ್ಕ ರವರ ಮನೆಯ ಮೇಲೆ ದಾಳಿ ನಡೆಸಿರುವುದು ಅನೇಕ ಕುತೂಹಲಕ್ಕೆ ಕಾರಣವಾಗಿದೆ.

Comments

Leave a Reply

Your email address will not be published. Required fields are marked *