ನಾಳೆ ಸಿಎಂ ಸಿದ್ದರಾಮಯ್ಯ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ಯಾಟಿಂಗ್

ಮೈಸೂರು: ಈ ಬಾರಿಯ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಧುಮುಕುತ್ತಿರುವ ನಟ, ನಟಿಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವೇಳೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಶನಿವಾರ ಪ್ರಚಾರ ಮಾಡಲಿದ್ದಾರೆ.

ಈಗಾಗಲೇ ಸಿದ್ದರಾಮಯ್ಯ ಅವರ ಪರ ನಟಿ ಜಯಮಾಲಾ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಬಾಲಿವುಡ್ ನಟ ರಾಜ್ ಬಬ್ಬರ್ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಕಣಕ್ಕೆ ಇಳಿಯುತ್ತಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಯಿಂದ ಆರಂಭವಾಗುವ ದರ್ಶನ್ ಅವರ ಪ್ರಚಾರ ರಾತ್ರಿ 7.30ರ ವರೆಗೆ ಮುಂದುವರೆಯಲಿದೆ. ಕ್ಷೇತ್ರದ ಒಟ್ಟು 33 ಹಳ್ಳಿಗಳಲ್ಲಿ ದರ್ಶನ್ ರೋಡ್ ಶೋ ನಡೆಸಿ ಪ್ರಚಾರ ನಡೆಸಲಿದ್ದಾರೆ.

ಮೂಲತಃ ದರ್ಶನ್ ಮೈಸೂರಿನವರಾಗಿದ್ದು, ಅವರ ತಾಯಿ ಮೀನಾ ತೂಗುದೀಪ ಅವರು ಕಾಂಗ್ರೆಸ್ ಮುಖಂಡರು. ಹೀಗಾಗಿ ದರ್ಶನ್ ಸಿಎಂ ಪರ ಪ್ರಚಾರಕ್ಕೆ ಇಳಿಯುತ್ತಿದ್ದಾರೆ.

ಕಿಚ್ಚ ಸುದೀಪ್ ಪ್ರಚಾರ: ಮೇ 9 ರಂದು ನಟ ಕಿಚ್ಚ ಸುದೀಪ್ ಸಿಎಂ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಾರೆ ಎನ್ನಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದ ಅಖಾಡ ದಿನದಿನಕ್ಕೂ ಹೆಚ್ಚು ಪೈಪೋಟಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಎಲ್ಲಾ ರೀತಿಯ ಪ್ರಚಾರ ಅಸ್ತ್ರಗಳನ್ನು ಪ್ರಯೋಗಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ನಡೆದ ಯಾವುದೇ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರು ಯಾರು ಸಿದ್ದರಾಮಯ್ಯ ಅವರ ಪರ ಪ್ರಚಾರ ನಡೆಸಿರಲಿಲ್ಲ.

Comments

Leave a Reply

Your email address will not be published. Required fields are marked *