ಮೋದಿ ದೊಡ್ಡ ಕಲಾವಿದ ಅವರ ಮುಂದೆ ಪ್ರಕಾಶ ರೈ ಏನೂ ಅಲ್ಲ: ಜಿಗ್ನೇಶ್ ಮೇವಾನಿ

ರಾಯಚೂರು: ಪ್ರಧಾ ಮೋದಿ ದೊಡ್ಡ ಕಲಾವಿದ ಅವರ ಮುಂದೆ ಪ್ರಕಾಶ ರೈ ಏನೂ ಅಲ್ಲಾ ಅಂತ ಗುಜರಾತನ ಶಾಸಕ ಜಿಗ್ನೇಶ್ ಮೇವಾನಿ ವ್ಯಂಗ್ಯದ ಮಾತುಗಳನ್ನಾಡಿದ್ದಾರೆ.

ರಾಯಚೂರಿನಲ್ಲಿ ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘಟನೆಯ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಗ್ನೇಶ್, ನಾಟಕ ಬಂದ್ ಮಾಡಿ ಬಡವರಿಗೆ ಹಾಗು ದಲಿತರಿಗೆ ಊಟ ನೀಡಿ ಅಂತ ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು. ಪ್ರಧಾನಿಗಳಿಗೆ ಈಗ ದಲಿತರ ಬಗ್ಗೆ ಪ್ರೇಮವಾಗಿದೆ. ಗುಜರಾತ್ ದಲಿತರ ಮೇಲೆ ದೌರ್ಜನ್ಯ ನಡೆದಾಗ ಮೋದಿ ಹಾಗು ಬಿಜೆಪಿ ಮುಖಂಡರು ಎಲ್ಲಿಗೆ ಹೋಗಿದ್ದರು ಅಂತ ಪ್ರಶ್ನಿಸಿದರು. ಇದನ್ನೂ ಓದಿ: ಪ್ರಧಾನಿ ವಿರುದ್ಧ ಮಾತನಾಡಲು ಆರಂಭಿಸಿದ್ದ ದಿನದಿಂದ ಬಾಲಿವುಡ್ ಆಫರ್ ಗಳೇ ಬಂದಿಲ್ಲ: ಪ್ರಕಾಶ್ ರೈ

ಕರ್ನಾಟಕ ಚುನಾವಣೆ ಬಂದಾಗ ದಲಿತರ ಮನೆಯಲ್ಲಿ ಊಟ ಮಾಡುತ್ತಿದ್ದಾರೆ. ಸಫಾಯಿ ಕರ್ಮಚಾರಿ ಕೆಲಸ ಮಾಡುವುದನ್ನು ಬಿಡಿಸಲು ಟೆಕ್ನಾಲಾಜಿ ತೆಗೆದುಕೊಂಡು ಬನ್ನಿ. ರೋಹಿತ್ ವೇಮಲು ಹತ್ಯೆ ಮಾಡಿ ಈಗ ನಾಟಕ ಮಾಡುತ್ತೀರಿ, ನೀವು ಮನುವಾದಿ. ಪ್ರಧಾನ ಮಂತ್ರಿ ಮೋದಿ ನಾಲ್ಕು ವರ್ಷ ಬ್ಯಾಂಕುಗಳ ಕೊಳ್ಳೆ ಹೊಡೆದಿದ್ದಾರೆ. ಇವರು ಚೌಕಿದಾರರಲ್ಲ ದೇಶದ ನಂಬರ್ ಕಳ್ಳ ಅಂತಾ ಕಟು ಪದಗಳಿಂದ ಟೀಕಿಸಿದ್ರು.

Comments

Leave a Reply

Your email address will not be published. Required fields are marked *