ಸಪ್ತಪದಿ ತುಳಿದು ನವದಂಪತಿಯಿಂದ ಮತದಾನ

ಧಾರವಾಡ/ಬೆಂಗಳೂರು: ರಾಜ್ಯದ ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದ್ದು, ನಗರದ ನವ ದಂಪತಿ ನೇರವಾಗಿ ಮದುವೆ ಮಂಟಪದಿಂದ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನ ಚಲಾಯಿಸಿದ್ದಾರೆ.

ಧಾರವಾಡ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿಂದು ಮಲ್ಲಿಕಾರ್ಜುನ ಮತ್ತು ನಿಖಿತಾ ಮದುವೆ ನಿಶ್ಚಯವಾಗಿತ್ತು. ಈ ದಂಪತಿ ಸಪ್ತಪದಿ ತುಳಿದ ನಂತರ ನೇರವಾಗಿ ನಗರದ ಕಾಮನಕಟ್ಟಿ ಬುತ್ ನಂಬರ್ 191 ರ ಮತಗಟ್ಟೆಗೆ ತೆರಳಿ ಮತಚಲಾಯಿಸಿದ್ದಾರೆ.

ಈ ವೇಳೆ ವರ ಮಲ್ಲಿಕಾರ್ಜುನ ಮತ್ತು ನಿಖಿತಾಗೆ ಮತಗಟ್ಟೆ ಬಳಿ ಇದ್ದ ಮತದಾರರು ಶುಭ ಕೋರಿದ್ದಾರೆ. ಇನ್ನು ವರ ಮಲ್ಲಿಕಾರ್ಜುನ, ಎಲ್ಲರು ಮತ ಚಲಾಯಿಸಿ ಮತದಾನ ಮಾಡುವುದು ನಮ್ಮ ಹಕ್ಕು. ನಮ್ಮ ರಾಜ್ಯಕ್ಕಾಗಿ ಮತದಾನ ಮಾಡಿ ಎಂದು ಕರೆ ನೀಡಿದ್ದಾರೆ.

ಒಟ್ಟು 222 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಮೇ 15ಕ್ಕೆ ಮತ ಎಣಿಕೆ ನಡೆಯಲಿದೆ. ರಾತ್ರಿ ಸುರಿದ ಮಳೆಯ ಪರಿಣಾಮ ಬೆಂಗಳೂರಿನ ಸಿ.ವಿ.ರಾಮನ್ ನಗರದ ಬೂತ್ ನಂಬರ್ 122 ರ ಮತಗಟ್ಟೆ ತುಂಬಾ ನೀರು ತುಂಬಿದೆ. ಇದರಿಂದ ಚುನಾವಣಾ ಸಿಬ್ಬಂದಿ ನೀರು ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಮತದಾನ ಮಾಡಲು ಬರುವ ಮತದಾರರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ಬಳಿಕ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಬೆಳಗಿನ ಅವಧಿಯಲ್ಲೇ ಬಿರುಸಿನ ಮತದಾನ ನಡೆದಿದೆ.

Comments

Leave a Reply

Your email address will not be published. Required fields are marked *