ತೀರ್ಪಿನ ಮೊದಲೇ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

ಮಂಗಳೂರು: ಇಂದು ಕರ್ನಾಟಕ ಕುರುಕ್ಷೇತ್ರದ ಫಲಿತಾಂಶ ಹೊರ ಬೀಳಲಿದೆ. ಈಗಾಗಲೇ ಚುನಾವಣಾ ಆಯೋಗ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಬೆಳಗ್ಗೆ 7ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಬೆಂಬಲಿಗರು ಚುನಾವಣಾ ಫಲಿತಾಂಶದ ಮೊದಲೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಯುವ ಕಾಂಗ್ರೆಸ್ ಸದಸ್ಯರು ಮಂಗಳೂರಿನ ಫಳ್ನೀರ್ ಮಿಲಾಗ್ರಿಸ್ ವಾರ್ಡ್ ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಫಲಿತಾಂಶಕ್ಕೂ ಮೊದ್ಲೇ ಬಿಜೆಪಿ ಅಭ್ಯರ್ಥಿಯಿಂದ ವಿಜಯೋತ್ಸವ!

ನಗರದ ಮಥಾಯಸ್ ಪಾರ್ಕ್ ಬಳಿಯೂ ತಡರಾತ್ರಿ ಕಾಂಗ್ರೆಸ್ ಸದಸ್ಯರು ಸಂಭ್ರಮ ಆಚರಣೆ ಮಾಡಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಜೆ.ಆರ್.ಲೋಬೋ, ಬಿಜೆಪಿಯಿಂದ ವೇದವ್ಯಾಸ ಕಾಮತ್ ಮತ್ತು ಜೆಡಿಎಸ್ ನಿಂದ ರತ್ನಾಕರ ಸುವರ್ಣ ಕಣದಲ್ಲಿದ್ದಾರೆ.

Comments

Leave a Reply

Your email address will not be published. Required fields are marked *