ಗುಜರಾತ್‍ಗೆ ತೆರಳಿದ್ದಾರಾ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್?

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಟೆನ್ಸನ್ ಮೇಲೆ ಟೆನ್ಸನ್ ಆರಂಭವಾಗಿದ್ದು, ಬಳ್ಳಾರಿ ಜಿಲ್ಲೆಯ ವಿಜಯ ನಗರ ಶಾಸಕ ಆನಂದ್ ಸಿಂಗ್ ಗಾಗಿ ಕಾಂಗ್ರೆಸ್ ಹುಡುಕಾಟ ನಡೆಸುತ್ತಿದೆ.

ಶಾಸಕ ಆನಂದ್ ಸಿಂಗ್ ಅವರು ಕಾಂಗ್ರೆಸ್ ನಾಯಕರ ಕೈಗೆ ಸಿಗುತ್ತಿಲ್ಲ. ಈ ಮಧ್ಯೆ ಆನಂದ್ ಸಿಂಗ್ ಅವರು ಗುಜರಾತ್ ಗೆ ತೆರಳಿದ್ದಾರೆಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೀಗಾಗಿ ಗುಜರಾತ್ ಕಾಂಗ್ರೆಸ್ ನಾಯಕರ ಮೂಲಕ ಆನಂದ್ ಸಿಂಗ್ ಸಂಪರ್ಕ ಮಾಡಲು ಪ್ರಯತ್ನ ಮಾಡಲಾಗುತ್ತಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ. ಇದನ್ನೂ ಓದಿ: ಅಧಿಕಾರಕ್ಕಾಗಿ ಆನಂದ್ ಸಿಂಗ್ ಡಬಲ್ ಗೇಮ್!

ಹಾಗಿದ್ರೆ ಶಾಸಕ ಆನಂದ್ ಸಿಂಗ್ ಎಲ್ಲಿ ಹೋದ್ರು? ಕಾಂಗ್ರೆಸ್ ನಾಯಕರಿಗೆ ಕೈ ಕೊಡ್ತಾರಾ ಎಂಬ ಅನುಮಾನವೊಂದು ಮಾಡಿದೆ. ಒಟ್ಟಿನಲ್ಲಿ ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಆನಂದ್ ಸಿಂಗ್ ನಡೆ ಇದೀಗ ಕಾಂಗ್ರೆಸ್ ನವರಿಗೆ ತೀವ್ರ ತಲೆನೋವಾಗಿದೆ.

Comments

Leave a Reply

Your email address will not be published. Required fields are marked *